ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ.
ಬಿಸಿರೋಡಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಇರುವ ನಾಗರಾಜ್ ಎಂಬವರಿಗೆ ಸೇರಿದ ನಾಗ ಕ್ಯಾಂಟೀನ್ನ ಹಿಂಬದಿಯಲ್ಲಿ ದೋಸೆ ಮಾಡಲು ಇರಿಸಲಾಗಿದ್ದ ಅಡುಗೆ ಅನಿಲದಲ್ಲಿ ಸೋರಿಕೆ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ದೋಸೆ ಮಾಡುತ್ತಿದ್ದ ಕ್ಯಾಂಟೀನ್ನ ಕೆಲಸಗಾರ ವಿಶ್ವನಾಥ ಎಂಬವರಿಗೆ ಅನಿಲ ಸೋರಿಕೆಯಿಂದ ತಗುಲಿಗೊಂಡ ಬೆಂಕಿಗೆ ಸ್ವಲ್ಪ ಮಟ್ಟಿಗೆ ಗಾಯವಾಗಿದೆ. ಇದರ ಜೊತೆಗೆ ಕ್ಯಾಂಟೀನ್ನಲ್ಲಿ ಕೆಲಸ ಮಾಡುತ್ತಿದ್ದ ಮಾಲಕನ ಸಹೋದರ ಹರೀಶ್ ಎಂಬವರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ವಲ್ಪದರದಲ್ಲಿ ಅತ್ಯಂತ ದೊಡ್ಡ ಅನಾಹುತ ತಪ್ಪಿದೆ. ಬೆಳಿಗ್ಗೆ ಹೊತ್ತಿಗೆ ಕ್ಯಾಂಟೀನ್ಗೆ ನೂರಾರು ಜನ ಗ್ರಾಹಕರು ಬರುವ ಸಮಯ ಮತ್ತು ಹತ್ತಿರದಲ್ಲಿ ರಕ್ತೇಶ್ವರಿ ದೇವಸ್ಥಾನ, ಅನೇಕ ಸರಕಾರಿ ಕಚೇರಿಗಳು ಹೀಗೆ ಕೋಟ್ಯಾಂತರ ಬೆಲೆ ಬಾಳುವ ಸುತ್ತಲಿನ ಜಾಗವಾಗಿದ್ದು, ಸದ್ಯ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆಯಿಂದ ಬೆಂಕಿಯನ್ನು ಕೂಡಲೇ ಸ್ಥಳೀಯರು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಅಪಾಯ ತಪ್ಪಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…