ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ ಕುಳಿತುಕೊಳ್ಳಬೇಕಾದ ಸ್ಥಿತಿಯೊಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ.
ಹಲವು ಗ್ರಾಮಗಳನ್ನು ಸಂಪರ್ಕಿಸುತ್ತಿದ್ದ ತಾರಬಳಿ ಸಂಪರ್ಕ ಸೇತುವೆ ಕುಸಿತ ಕಂಡ ಕಾರಣದಿಂದ, ನಿತ್ಯ ಇದನ್ನೇ ನಂಬಿ ಸಂಚರಿಸುತ್ತಿದ್ದ ನೂರಾರು ಜನರು ದಿಕ್ಕು ತೋಚದಂತಾಗಿ ಕಂಗಲಾಗಿದ್ದಾರೆ. ತಾರಬಳಿ ಸೇತುವೆ ಕುಸಿತದ ಬಳಿಕ ಇದೀಗ ಕಿರಲೆ, ಭಟ್ಟಾಜೆ, ಸೊರ್ನಾಡು, ಎರ್ಮಲಪದವು, ಕುರಿಯಾಳ, ಬಾಳಿಕೆ, ಬಂಡಸಾಲೆ ಸೇತುವೆಯ ಒಂದು ಕಡೆಯಾದರೆ, ಕೊಳತ್ತಮಜಲು, ಬಡಗಬೆಳ್ಳೂರು, ಪೊಳಲಿ ಮತ್ತೊಂದು ಕಡೆ. ಈ ಎರಡೂ ಕಡೆಯ ಸಂಪರ್ಕಕ್ಕೆ ತಾರಬಳಿ ಸೇತುವೆಯೇ ಆಧಾರ.
ಆದರೆ, ಗ್ರಾಮೀಣ ಜನರ ನಿತ್ಯ ಓಡಾಟದ ಕೊಂಡಿ ಇಲ್ಲಿ ಕೈ ತಪ್ಪಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ಗ್ರಾಮದ ಭಟ್ಟಾಜೆ ಎಂಬಲ್ಲಿನ ತಾರಬಳಿ ಸೇತುವೆ ಕಳೆದ ಕೆಲವು ತಿಂಗಳಿನಿಂದ ಅಪಾಯಕಾರಿಯ ಕರೆ ಘಂಟೆ ಬಾರಿಸಿ, ಸಂಬಂಧಿಸಿವರ ಗಮನ ಸೆಳೆದಿತ್ತು. ಹೀಗಾಗಿ ಸೇತುವೆಯ ಮೂಲಕ ಘನವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಕೇವಲ ಲಘು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಸಂಚಾರ ನಿಯಂತ್ರಣಕ್ಕಾಗಿ ಪಂಚಾಯತ್ ವತಿಯಿಂದ ಎರಡೂ ರಸ್ತೆಯ ಕಡೆಯಲ್ಲಿ ಕಲ್ಲಿನ ಗೋಡೆ ಕಟ್ಟಿ ಘನ ವಾಹನಗಳಿಗೆ ನಿಯಂತ್ರಣ ಹೇರಲಾಗಿತ್ತು. ದಿನಕಳೆದಂತೆ ಸೇತುವೆ ಮತ್ತಷ್ಟು ಅಪಾಯಕಾರಿಯಾಗಿ ಬದಲಾಗುತ್ತಿರುವುದು ಕಂಡ ಸ್ಥಳೀಯರು ಜೀವ ಬಲಿಯಾಗುವ ಮುನ್ನ ಸೇತುವೆ ತೆರವು ಮಾಡುವಂತೆ ಒತ್ತಾಯ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…