ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ ಕುಳಿತುಕೊಳ್ಳಬೇಕಾದ ಸ್ಥಿತಿಯೊಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ.
ಹಲವು ಗ್ರಾಮಗಳನ್ನು ಸಂಪರ್ಕಿಸುತ್ತಿದ್ದ ತಾರಬಳಿ ಸಂಪರ್ಕ ಸೇತುವೆ ಕುಸಿತ ಕಂಡ ಕಾರಣದಿಂದ, ನಿತ್ಯ ಇದನ್ನೇ ನಂಬಿ ಸಂಚರಿಸುತ್ತಿದ್ದ ನೂರಾರು ಜನರು ದಿಕ್ಕು ತೋಚದಂತಾಗಿ ಕಂಗಲಾಗಿದ್ದಾರೆ. ತಾರಬಳಿ ಸೇತುವೆ ಕುಸಿತದ ಬಳಿಕ ಇದೀಗ ಕಿರಲೆ, ಭಟ್ಟಾಜೆ, ಸೊರ್ನಾಡು, ಎರ್ಮಲಪದವು, ಕುರಿಯಾಳ, ಬಾಳಿಕೆ, ಬಂಡಸಾಲೆ ಸೇತುವೆಯ ಒಂದು ಕಡೆಯಾದರೆ, ಕೊಳತ್ತಮಜಲು, ಬಡಗಬೆಳ್ಳೂರು, ಪೊಳಲಿ ಮತ್ತೊಂದು ಕಡೆ. ಈ ಎರಡೂ ಕಡೆಯ ಸಂಪರ್ಕಕ್ಕೆ ತಾರಬಳಿ ಸೇತುವೆಯೇ ಆಧಾರ.
ಆದರೆ, ಗ್ರಾಮೀಣ ಜನರ ನಿತ್ಯ ಓಡಾಟದ ಕೊಂಡಿ ಇಲ್ಲಿ ಕೈ ತಪ್ಪಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ಗ್ರಾಮದ ಭಟ್ಟಾಜೆ ಎಂಬಲ್ಲಿನ ತಾರಬಳಿ ಸೇತುವೆ ಕಳೆದ ಕೆಲವು ತಿಂಗಳಿನಿಂದ ಅಪಾಯಕಾರಿಯ ಕರೆ ಘಂಟೆ ಬಾರಿಸಿ, ಸಂಬಂಧಿಸಿವರ ಗಮನ ಸೆಳೆದಿತ್ತು. ಹೀಗಾಗಿ ಸೇತುವೆಯ ಮೂಲಕ ಘನವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಕೇವಲ ಲಘು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಸಂಚಾರ ನಿಯಂತ್ರಣಕ್ಕಾಗಿ ಪಂಚಾಯತ್ ವತಿಯಿಂದ ಎರಡೂ ರಸ್ತೆಯ ಕಡೆಯಲ್ಲಿ ಕಲ್ಲಿನ ಗೋಡೆ ಕಟ್ಟಿ ಘನ ವಾಹನಗಳಿಗೆ ನಿಯಂತ್ರಣ ಹೇರಲಾಗಿತ್ತು. ದಿನಕಳೆದಂತೆ ಸೇತುವೆ ಮತ್ತಷ್ಟು ಅಪಾಯಕಾರಿಯಾಗಿ ಬದಲಾಗುತ್ತಿರುವುದು ಕಂಡ ಸ್ಥಳೀಯರು ಜೀವ ಬಲಿಯಾಗುವ ಮುನ್ನ ಸೇತುವೆ ತೆರವು ಮಾಡುವಂತೆ ಒತ್ತಾಯ ಮಾಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…