ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅರ್ಭಿ- ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ…!

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಹುಕಾಲದ ಬೇಡಿಕೆಯಾಗಿದ್ದ ಅರಳ ಗ್ರಾಮದ ಅರ್ಭಿ-ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ರೂ.20 ಲಕ್ಷಗಳ ವಿಶೇಷ ಅನುದಾನ ಮಂಜೂರಾಗಿದ್ದು, ಕಾಮಗಾರಿಯ ಉದ್ಘಾಟನೆಯನ್ನು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ನೆರವೇರಿಸಿದ್ದಾರೆ.

ಗ್ರಾಮದ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಈ ರಸ್ತೆ ಅಭಿವೃದ್ಧಿಗಾಗಿ ವಿಶೇಷ ಅನುದಾನ ಮಂಜೂರು ಮಾಡಿಸಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಈ ಅನುದಾನವನ್ನು ಮಂಜೂರು ಮಾಡುವಲ್ಲಿ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ವಿಶೇಷ ಆಸಕ್ತಿ ವಹಿಸಿದ್ದು, ಅನುದಾನ ಮಂಜೂರಾತಿಗೆ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ಸಹಕಾರ ನೀಡಿದ್ದಾರೆ.

ಅರ್ಭಿ-ದೆಂಬುಡೆ ರಸ್ತೆ ಕಾಂಕ್ರೀಟೀಕರಣದಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಬೇಬಿ ಕುಂದರ್, ಗ್ರಾಮಪಂಚಾಯತ್ ಸದಸ್ಯರು ದೇಜಪ್ಪ ಪೂಜಾರಿ, ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ಕಾಮಗಾರಿ…!

ಉಡುಪಿ: ಕಾಪು ಕೋತಲಕಟ್ಟೆ ಜಂಕ್ಷನ್ ನಲ್ಲಿರುವ ಡೈವರ್ಷನ್ ಬಳಿ ಸರಣಿ ಅಪ*ಘಾತ…!

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

error: Content is protected !!