ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿಸಿರೋಡಿನಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್ ಕಾರ್ಯಾಚರಣೆ….!

ಟ್ರಾಫಿಕ್ ಎಸ್. ಐ.ಆದರ್ಶ್ ನೇತ್ರತ್ವದಲ್ಲಿ ಟ್ರಾಫಿಕ್ ಪೋಲೀಸರ ತಂಡ ಬಿಸಿರೋಡಿನ ಹೃದಯಭಾಗದಲ್ಲಿ ಟ್ರಾಫಿಕ್ ನಿಯಮ ಪಾಲಿಸದ ವಾಹನ ಸವಾರರಿಗೆ ದಂಡ ವಿಧಿಸಿದ್ದಲ್ಲದೆ, ಟ್ರಾಫಿಕ್ ಕಿರಿಕಿರಿಯನ್ನು ಉಂಟು ಮಾಡುತ್ತಿದ್ದ ಬಸ್ ಹಾಗೂ ರಿಕ್ಷಾ ಚಾಲಕರಿಗೆ ಸಖತ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.

ಬಿಸಿರೋಡಿನ ಬಸ್ ನಿಲ್ದಾಣದ ಬಳಿ ಗ್ರಾಮೀಣ ಭಾಗಕ್ಕೆ ತೆರಳುವ ಖಾಸಗಿ ಬಸ್ ಹಾಗೂ ಗ್ರಾಮೀಣ ಪರ್ಮಿಟ್ ಹೊಂದಿರುವ ರಿಕ್ಷಾ ಚಾಲಕರು ರಿಕ್ಷಾಗಳನ್ನು ನಿಲ್ಲಿಸಿ , ಸಂಚಾರಕ್ಕೆ ಅಡವಣೆ ಉಂಟು ಮಾಡುತ್ತಿದ್ದಾರೆ ಎಂಬ ಆರೋಪಗಳು ಅನೇಕ ದಿನಗಳಿಂದ ಕೇಳಿ ಬಂದಿತ್ತು. ಈ ದಿನ ಸ್ವತಃ ಟ್ರಾಫಿಕ್ ಎಸ್.ಐ.ಆದರ್ಶ್ ಅವರು ಫೀಲ್ಡಿಗಿಳಿದು ಬಸ್‌ಗಳ ಚಾಲಕರಿಗೆ ಹಾಗೂ ರಿಕ್ಷಾ ಚಾಲಕರಿಗೆ ಕ್ಲಾಸ್ ತೆಗೆದಯಕೊಂಡಿದ್ದಲ್ಲದೆ, ಪ್ರತಿ ವಾಹನಗಳ ದಾಖಲೆಗಳನ್ನು ಪರಿಶೀಲಿಸಿ, ನಿಯಮ ಪಾಲನೆಯ ಬಿಸಿ ಮುಟ್ಟಿಸಿದ್ದಾರೆ.

ಇದರ ಜೊತೆ ಒಟ್ಟು 25 ಪ್ರಕರಣಗಳನ್ನು ವಿವಿಧ ವಾಹನಗಳಿಗೆ ಬೇರೆ ಕಾರಣಗಳಿಗಾಗಿ ದಾಖಲು ಮಾಡಿದ್ದಾರೆ. ಅದರಲ್ಲಿ 13 ಪ್ರಕರಣಗಳು ಕರ್ಕಶ ಹಾರ್ನ್ಗಳನ್ನು ಅಳವಡಿಸಿದ ಕಾರಣಕ್ಕೆ ಉಳಿದಂತೆ ನಂಬರ್ ಪ್ಲೇಟ್ ಇಲ್ಲದ ವಾಹನಗಳು ಹಾಗೂ ಕರ್ಕಶ ಶಬ್ದ ಮಾಡುವ ವಾಹನಗಳ ಸೈಲೆನ್ಸ್ರ್‌ಗಳನ್ನು ಹೊಂದಿರುವ ವಾಹನಗಳ ಮೇಲೆ ಪ್ರಕರಣ ದಾಖಲು ಮಾಡಿರುವ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಬಿಸಿರೋಡಿನ ಕೈಕಂಬದಲ್ಲೂ ಇದೇ ಮಾದರಿಯ ಕಾರ್ಯಾಚರಣೆ ಮಾಡುವಂತೆ ಸಾರ್ವಜನಿಕ ವಲಯದಿಂದ ಒತ್ತಾಯಗಳು ಕೇಳಿ ಬಂದಿದ್ದು, ಇಲ್ಲಿ ಟ್ರಾಫಿಕ್ ರೂಲ್ ಫಾಲೋ ಮಾಡದೆ ಅಡ್ಡಾದಿಡ್ಡಿ ವಾಹನಗಳ ಚಾಲನೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಇವೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!