ಟ್ರಾಫಿಕ್ ಎಸ್. ಐ.ಆದರ್ಶ್ ನೇತ್ರತ್ವದಲ್ಲಿ ಟ್ರಾಫಿಕ್ ಪೋಲೀಸರ ತಂಡ ಬಿಸಿರೋಡಿನ ಹೃದಯಭಾಗದಲ್ಲಿ ಟ್ರಾಫಿಕ್ ನಿಯಮ ಪಾಲಿಸದ ವಾಹನ ಸವಾರರಿಗೆ ದಂಡ ವಿಧಿಸಿದ್ದಲ್ಲದೆ, ಟ್ರಾಫಿಕ್ ಕಿರಿಕಿರಿಯನ್ನು ಉಂಟು ಮಾಡುತ್ತಿದ್ದ ಬಸ್ ಹಾಗೂ ರಿಕ್ಷಾ ಚಾಲಕರಿಗೆ ಸಖತ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.
ಬಿಸಿರೋಡಿನ ಬಸ್ ನಿಲ್ದಾಣದ ಬಳಿ ಗ್ರಾಮೀಣ ಭಾಗಕ್ಕೆ ತೆರಳುವ ಖಾಸಗಿ ಬಸ್ ಹಾಗೂ ಗ್ರಾಮೀಣ ಪರ್ಮಿಟ್ ಹೊಂದಿರುವ ರಿಕ್ಷಾ ಚಾಲಕರು ರಿಕ್ಷಾಗಳನ್ನು ನಿಲ್ಲಿಸಿ , ಸಂಚಾರಕ್ಕೆ ಅಡವಣೆ ಉಂಟು ಮಾಡುತ್ತಿದ್ದಾರೆ ಎಂಬ ಆರೋಪಗಳು ಅನೇಕ ದಿನಗಳಿಂದ ಕೇಳಿ ಬಂದಿತ್ತು. ಈ ದಿನ ಸ್ವತಃ ಟ್ರಾಫಿಕ್ ಎಸ್.ಐ.ಆದರ್ಶ್ ಅವರು ಫೀಲ್ಡಿಗಿಳಿದು ಬಸ್ಗಳ ಚಾಲಕರಿಗೆ ಹಾಗೂ ರಿಕ್ಷಾ ಚಾಲಕರಿಗೆ ಕ್ಲಾಸ್ ತೆಗೆದಯಕೊಂಡಿದ್ದಲ್ಲದೆ, ಪ್ರತಿ ವಾಹನಗಳ ದಾಖಲೆಗಳನ್ನು ಪರಿಶೀಲಿಸಿ, ನಿಯಮ ಪಾಲನೆಯ ಬಿಸಿ ಮುಟ್ಟಿಸಿದ್ದಾರೆ.
ಇದರ ಜೊತೆ ಒಟ್ಟು 25 ಪ್ರಕರಣಗಳನ್ನು ವಿವಿಧ ವಾಹನಗಳಿಗೆ ಬೇರೆ ಕಾರಣಗಳಿಗಾಗಿ ದಾಖಲು ಮಾಡಿದ್ದಾರೆ. ಅದರಲ್ಲಿ 13 ಪ್ರಕರಣಗಳು ಕರ್ಕಶ ಹಾರ್ನ್ಗಳನ್ನು ಅಳವಡಿಸಿದ ಕಾರಣಕ್ಕೆ ಉಳಿದಂತೆ ನಂಬರ್ ಪ್ಲೇಟ್ ಇಲ್ಲದ ವಾಹನಗಳು ಹಾಗೂ ಕರ್ಕಶ ಶಬ್ದ ಮಾಡುವ ವಾಹನಗಳ ಸೈಲೆನ್ಸ್ರ್ಗಳನ್ನು ಹೊಂದಿರುವ ವಾಹನಗಳ ಮೇಲೆ ಪ್ರಕರಣ ದಾಖಲು ಮಾಡಿರುವ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಬಿಸಿರೋಡಿನ ಕೈಕಂಬದಲ್ಲೂ ಇದೇ ಮಾದರಿಯ ಕಾರ್ಯಾಚರಣೆ ಮಾಡುವಂತೆ ಸಾರ್ವಜನಿಕ ವಲಯದಿಂದ ಒತ್ತಾಯಗಳು ಕೇಳಿ ಬಂದಿದ್ದು, ಇಲ್ಲಿ ಟ್ರಾಫಿಕ್ ರೂಲ್ ಫಾಲೋ ಮಾಡದೆ ಅಡ್ಡಾದಿಡ್ಡಿ ವಾಹನಗಳ ಚಾಲನೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಇವೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…