ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಜೂ.28ರಂದು ಪುರಭವನದಲ್ಲಿ ನಡೆಯಲಿದೆ ವಿಧಾತ್ರಿ ಸಂಭ್ರಮ-2026′ ಕಾರ್ಯಕ್ರಮ….!

ಕಳೆದ 17 ವರ್ಷಗಳಿಂದ ತುಳು ರಂಗಭೂಮಿಯಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವಿಧಾತ್ರಿ ಕಲಾವಿದೆರ್ ಕುಡ್ಲ ಸಂಸ್ಥೆಯ ವತಿಯಿಂದ ವಿಧಾತ್ರಿ ಸಂಭ್ರಮ-2026′ ಕಾರ್ಯಕ್ರಮವನ್ನು ಜೂನ್ 28ರಂದು ಸಂಜೆ 4.30ಕ್ಕೆ ಮಂಗಳೂರು ನಗರದ ಪುರಭವನ ನಲ್ಲಿ ಚಿದಾನಂದ ಅದ್ಯಪಾಡಿ ಸಾರಥ್ಯದಲ್ಲಿ , ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ಭರತ್ ಎಸ್ ಕರ್ಕೇರ ರಚನೆಯ ತುಳು ಮತ್ತು ಕನ್ನಡ ಭಾಷೆಯಲ್ಲಿ ರಚನೆಯಾದ ಜೈ ಹನುಮಾನ್ ನಾಟಕ ಪ್ರದರ್ಶನ ನಡೆಯಲಿದೆ.

ತುಳು ರಂಗಭೂಮಿ ಕಲಾವಿದ ಚಿದಾನಂದ ಅಡ್ಯಪಾಡಿ ಈ ಕುರಿತು ಮಾಹಿತಿ ನೀಡಿ, ವಿಧಾತ್ರಿ ಕಲಾವಿದೇರ್ ಕುಡ್ಲ ತಂಡವು ಕಳೆದ 17 ವರ್ಷಗಳಿಂದ ತುಳುನಾಡಿನಲ್ಲಷ್ಟೇ ಅಲ್ಲದೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ ಹಾಗೂ ಮುಂಬೈ ಸೇರಿದಂತೆ ವಿವಿಧೆಡೆಗಳಲ್ಲಿ ನಾಟಕ ಪ್ರದರ್ಶನಗಳನ್ನು ನೀಡಿ ಜನಮನ್ನಣೆ ಗಳಿಸಿದೆ ಎಂದು ತಿಳಿಸಿದ್ದಾರೆ. ಐತಿಹಾಸಿಕ, ಜಾನಪದ ಹಾಗೂ ಹಾಸ್ಯಮಯ ನಾಟಕಗಳ ಮೂಲಕ ಪ್ರೇಕ್ಷಕರ ಮನಗೆದ್ದಿರುವ ತಂಡವು ಈ ಬಾರಿ ವಿಶೇಷ ವೆಚ್ಚದಲ್ಲಿ ಅದ್ಧೂರಿ ರಂಗ ವಿನ್ಯಾಸ ಹಾಗೂ ಸಿನಿಮೀಯ ಮಾದರಿಯ ನಿರೂಪಣೆಯೊಂದಿಗೆ ‘ಜೈ ಹನುಮಾನ್’ ಎಂಬ ನಾಟಕವನ್ನು ಪ್ರದರ್ಶಿಸಲಿದೆ ಎಂದು ಹೇಳಿದ್ದಾರೆ. ತುಳುನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹೊಸ ಬದಲಾವಣೆಯ ಹರಿಕಾರರೆಂದು ಗುರುತಿಸಿಕೊಂಡಿರುವ ಕಲಾ ಸಂಘಟಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ನಿರ್ದೇಶನದಲ್ಲಿ ನಾಟಕ ಮೂಡಿಬಂದಿದ್ದು, ಈಗಾಗಲೇ ಪ್ರೇಕ್ಷಕರಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ ಎಂದಿದ್ದಾರೆ. ಕಾರ್ಯಕ್ರಮದ ಅಂಗವಾಗಿ ‘ವಿಧಾತ್ರಿ ಸಂಭ್ರಮ-2026’ ಪ್ರಶಸ್ತಿ ಪ್ರದಾನ ಸಮಾರಂಭವೂ ನಡೆಯಲಿದೆ. ತುಳುನಾಡಿನ ಕಲಾಭಿಮಾನಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ನಾಟಕಕ್ಕೆ ಉಚಿತ ಪ್ರವೇಶವಿದ್ದು, ತುಳುನಾಡಿನ ವಿವಿಧ ಸಂಘ-ಸAಸ್ಥೆಗಳು ಹಾಗೂ ನಾಟಕಾಸಕ್ತರು ಆಗಮಿಸಿ ನಾಟಕವನ್ನು ವೀಕ್ಷಿಸಿ ಸಹಕರಿಸುವಂತೆ ಆಯೋಜಕರು ಕೋರಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!