ಮಣಿಪಾಲದ ಈಶ್ವರನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯವಾಗುವಂತೆ ಮಾಡಿದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಜೂನ್ 19ರಂದು ರಾತ್ರಿ 10.08ರ ಸುಮಾರಿಗೆ ಮಣಿಪಾಲದ ಸಾಯಿಸಾಗರ್ ಹೋಟೆಲ್ ಎದುರಿನ ಯು-ಟರ್ನ್ ಬಳಿ ಈ ಅಪಘಾತ ಸಂಭವಿಸಿತ್ತು. ಕರ್ವಾಲು ಅಲೆವೂರು ಗ್ರಾಮದ ಅಭಿಷೇಕ್ ನಾಯಕ್ ಅವರು ತಮ್ಮ ಸ್ಕೂಟಿಯಲ್ಲಿ ಕೆಳಪರ್ಕಳದಲ್ಲಿರುವ ಮನೆಗೆ ತೆರಳುತ್ತಿದ್ದ ವೇಳೆ, ಎಂಐಟಿ ಕಡೆಯಿಂದ ಬಂದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಾರನ್ನು ಕಾರ್ಕಳ ತಾಲೂಕಿನ ಮುಡಾರು ನಿವಾಸಿ ಸಮೇಗ್ದ್ ಎಲ್.ಜೆ. ಎಂಬಾತ ಚಲಾಯಿಸುತ್ತಿದ್ದು, ಮದ್ಯಪಾನದ ಅಮಲಿನಲ್ಲಿ ಅಜಾಗರೂಕವಾಗಿ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಅಭಿಷೇಕ್ ನಾಯಕ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಕೂಟಿ ಹಾಗೂ ಕಾರು ಜಖಂಗೊಂಡಿವೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಜೂನ್ 22ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…