ಜನ ಮನದ ನಾಡಿ ಮಿಡಿತ

Advertisement

ಮಧೂರು: ತೆಂಕಣ ಯಕ್ಷಗಾನಕ್ಕೆ ಅನನ್ಯ ಕೊಡುಗೆ ಇತ್ತ ಮಧೂರು ವೆಂಕಟ ಕೃಷ್ಣ ಇನ್ನಿಲ್ಲ..!

ಗಡಿನಾಡು ಕಾಸರಗೋಡಿನ ಹಿರಿಯ ಪ್ರಸಂಗಕರ್ತ ಯಕ್ಷಗಾನ ಅರ್ಥಧಾರಿ, ನಿವೃತ್ತ ಸೇಲ್ ಟೇಕ್ಸ್ ಅಧಿಕಾರಿ ಮಧೂರು ವೆಂಕಟಕೃಷ್ಣ ನಿಧನರಾಗಿದ್ದಾರೆ.

ವಯೋ ಸಹಜ ಅಸೌಖ್ಯ ನಿಮಿತ್ತ ಸೋಮವಾರ ಸಂಜೆ ಮಧೂರಿನ ಸ್ವಗೃಹದಲ್ಲಿ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ ಸುಮಿತ್ರಾ ಹಾಗೂ ಇಬ್ಬರು ಪುತ್ರರು ಸಹಿತ ಓರ್ವ ಮಗಳು ಹಾಗೂ ಅಪಾರ ಆಪ್ತ ವಲಯವನ್ನು ಅಗಲಿದ್ದಾರೆ. ಕಾಸರಗೋಡಿನ ಮಾರಾಟ ತೆರಿಗೆ ಇಲಾಖೆ ಅಧಿಕಾರಿಯಾಗಿ ನಿವೃತ್ತರಾದ ಅವರು ಉಳಿಯ ಧನ್ವಂತರಿ ಯಕ್ಷಗಾನ ಸಂಘದ ನೆರಳಲ್ಲಿ ಅರ್ಥಧಾರಿ, ವೇಷಧಾರಿ, ಕಲಾವಿದನಾಗಿ ಮೆರೆದವರು. ತೆಂಕಣ ಯಕ್ಷಗಾನದ ದಂತಕಥೆ ಕೂಡ್ಲು ನಾರಾಯಣ ಬಲ್ಯಾಯರ ಶಿಷ್ಯನಾಗಿ ಯಕ್ಷಗಾನ ಶಿಕ್ಷಣ ಪಡೆದ ಅವರು ಪ್ರಸಂಗಕರ್ತನಾಗಿ ಮೆರೆದವರು. ಅವರ ಸಾಧನೆಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅವರಿಗೆ ರಾಜ್ಯ ಪ್ರಶಸ್ತಿಯನ್ನಿತ್ತು ಗೌರವಿಸಿದೆ. ಇನ್ನು ಮಧೂರು ಕ್ಷೇತ್ರಮಹಾತ್ಮೆ ಸಹಿತ ವೈಶಾಲಿನಿ ಪರಿಣಯ, ಧನ್ವಂತರಿ ಮಹಾತ್ಮೆ, ಕ್ಷೇತ್ರ ಮಹಾತ್ಮೆ, ನದಿಯಾಗಿ ಹರಿದ ನಂದಿನಿ, ದುಂಬಿಯಾಗಿ ನೆಗೆದ ಭ್ರಾಮರಿ ಹೀಗೆ ಅನೇಕ ಪ್ರಸಂಗಗಳನ್ನು ರಚಿಸಿದ ಇವರ ಕೃತಿಗಳು ಮೇಳದ ಆಟ, ತಾಳಮದ್ದಳೆ ಕೂಟಗಳಲ್ಲಿ ಜನಪ್ರಿಯವಾಗಿವೆ. ಇವರ ಕಾವ್ಯ ರಚನೆಗಳು ವಿವಿಧ ಭಾಗವತರ ಕಂಠದಲ್ಲಿ ಹಾಡಲ್ಪಟ್ಟು ಜಾಲತಾಣದ ಮೂಲಕ ಸಹಸ್ರಾರು ಕೇಳುಗರನ್ನು ತಲುಪಿದೆ. ಯಕ್ಷಗಾನದಲ್ಲಿ ಮೊದಲು ವಂದಿಸುವ ಮಧೂರು ಕ್ಷೇತ್ರದ ಮುಂಬಾಗಿಲಿನ ಬಳಿ ವಾಸಿಸುವ ಅವರು ಬರೆದ “ಮಧೂರು ಕ್ಷೇತ್ರ ಮಹಾತ್ಮೆ” ಇತ್ತೀಚಿನ ಮಧೂರು ಬ್ರಹ್ಮಕಲಶದ ವೇಳೆ ಪ್ರದರ್ಶನ ಕಂಡಿತ್ತು. ಆ ವೇದಿಕೆಯಲ್ಲಿ ಅವರನ್ನು ಸನ್ಮಾನಿಸಲಿಗಿತ್ತು. ತೆಂಕಣ ಯಕ್ಷಗಾನದ ಅನೂಭವಿಯಾಗಿದ್ದ ಅವರು ಅರ್ಥಗಾರಿಕೆ ಮೂಲಕ ಗತ ಕಾಲದ ಪ್ರಸಿದ್ಧರ ಹಾಡುಗಾರಿಕೆ ಆಲಿಸಿ, ಅರ್ಥವಿಸಿ ಬೆಳೆದವರು. ಅವರ ಪ್ರಸಂಗಗಳು ತೆಂಕಿನ ಎಲ್ಲಾ ಮೇಳಗಳಲ್ಲೂ ಜನಪ್ರಿಯವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!