ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮುಳುಗುತ್ತಿದ್ದ ಮಂಜು ಮಾತಾ ಬೋಟ್‌ನಿಂದ ಮೀನುಗಾರರ ರಕ್ಷಣೆ…..!

ಭಾರತೀಯ ತಟ ರಕ್ಷಣಾ ಪಡೆ ಆಳ ಸಮುದ್ರದಲ್ಲಿ ಅತ್ಯಂತ ಸವಾಲಿನ ಕಾರ್ಯಾಚರಣೆ ನಡೆಸಿ ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದೆ.

ಅತ್ಯಂತ ಸವಾಲಿನ ಕಡಲ ಶೋಧದಲ್ಲಿ ನಿನ್ನೆ ರಾತ್ರಿ ಇಂಡಿಯನ್ ಕೋಸ್ಟ್ ಗಾರ್ಡ್ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸಿದೆ. ಆಳ ಸಮುದ್ರದಲ್ಲಿ 33 ನಾಟಿಕಲ್ ಮೈಲ್ ದೂರದಲ್ಲಿ ಉಡುಪಿಯ ಮಂಜು ಮಾತಾ ಹೆಸರಿನ ಮೀನುಗಾರಿಕಾ ಬೋಟ್‌ನಲ್ಲಿದ್ದ 6 ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದಾರೆ.

ಬೋಟ್‌ನ ತಳಭಾಗಕ್ಕೆ ಹಾನಿಯಾಗಿ ಬೋಟ್‌ನೊಳಗೆ ಸಮುದ್ರದ ನೀರು ನುಗ್ಗ ತೊಡಗಿತ್ತು. ಮುಳುಗುತ್ತಿದ್ದ ಮೀನುಗಾರಿಕಾ ಬೋಟ್‌ನಿಂದ ತುರ್ತು ಸಂದೇಶ ರವಾನೆಯಾಗಿತ್ತು. ತುರ್ತು ಸಂದೇಶ ಸ್ವೀಕರಿಸಿದ ಕೋಸ್ಟ್ ಗಾರ್ಡ್ ಬೋಟ್ ಐ.ಸಿ.ಜಿ ಸಚೇತ್ ತಕ್ಷಣ ಕಾರ್ಯಾಚರಣೆಗೆ ಇಳಿದಿತ್ತು. ಮುಳುಗುತಿದ್ದ ಮೀನುಗಾರಿಕಾ ಬೋಟ್ ಮಂಜು ಮಾತಾವನ್ನು ಪತ್ತೆ ಹಚ್ಚಿ 90 ನಿಮಿಷಗಳ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಯೋಧರು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆಯೂ ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ರಿಮೋಟ್-ಆಪರೇಟೆಡ್ ಲೈಫ್‌ಬಾಯ್‌ಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!