ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ನೈಜ ಸುದ್ದಿಗಳೇ ಆರೋಗ್ಯಕರ ಸಮಾಜದ ಅಡಿಪಾಯ”: ಸುಧೀರ್ ಕುಮಾರ್ ರೆಡ್ಡಿ

ವೈಭವೀಕರಣವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ವ್ಯವಸ್ಥೆ ಹಾಗೂ ಮಾಧ್ಯಮ ಒಂದೇ ಹಾದಿಯಲ್ಲಿ ಸಾಗುತ್ತಿದ್ದು, ಇದು ಅರೋಗ್ಯಕರ ಬೆಳವಣಿಗೆ. ಒಂದೇ ಘಟನೆಯನ್ನು ಹಲವು ರೀತಿಯಲ್ಲಿ ವೈಭವೀಕರಣ ಮಾಡಲಾಗಿರುವ ಸುದ್ದಿಗಳನ್ನು ನಾನು ಹಿಂದೆ ಗಮನಿಸಿದ್ದೆ. ಆದರೆ ಇಂದು ಫ್ಯಾಕ್ಟ್ ಚೆಕ್ ಮಾದರಿಯಲ್ಲಿ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. ಇದು ಸಂತಸದ ವಿಚಾರ. ಪತ್ರಕರ್ತರು ನೈಜ ಸುದ್ದಿಗಳನ್ನು ನೈಜವಾಗಿ ನೀಡಬೇಕು. ಸಮಾಜದಲ್ಲಿ ವಸ್ತು ನಿಷ್ಠರಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಸಮಾರಂಭದ ವೇದಿಕೆಯಲ್ಲಿ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!