ಜನಪ್ರಿಯ ವೈದ್ಯರೂ, ಪ್ರಸಿದ್ಧ ಸಾಹಿತಿಯೂ ಆಗಿರುವ ಡಾ. ಸುರೇಶ್ ನೆಗಳಗುಳಿ ಇವರು “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026″ಕ್ಕೆ ಆಯ್ಕೆಯಾಗಿದ್ದಾರೆ.

ಜುಲೈ 26.ಭಾನುವಾರ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ “ದಲ್ಲಿ ಡಾ. ಸುರೇಶ್ ನೆಗಳಗುಳಿ ಇವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “ನೀಡಿ ಗೌರವಿಸಲಾಗುವುದು.
ಸಮ್ಮೇಳನ ಸಮಿತಿ ಅಧ್ಯಕ್ಷರಾಗಿರುವ ಡಾ. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ವಾಮನ್ ರಾವ್ ಬೇಕಲ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.



