ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಳಿಯ ವೇಳೆ ಮುಳಿಗದ್ದೆ ಝಕಾರಿಯಾ ಹಾಗೂ ಇತರರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರೆಂದು ಆರೋಪಿಸಲಾಗಿದ್ದು, ಪೊಲೀಸ್ ವಾಹನವನ್ನು ಕಂಡ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ದೃಢಪಟ್ಟಿದ್ದು, ಕೃತ್ಯಕ್ಕೆ ಬಳಸಲಾಗುತ್ತಿದ್ದ ಯಂತ್ರೋಪಕರಣಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.



