ಜನ ಮನದ ನಾಡಿ ಮಿಡಿತ

Advertisement

ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು; ಶಾಸಕ ವೇದವ್ಯಾಸ್ ಕಾಮತ್ ಸಂತಾಪ


ಮಂಗಳೂರು: ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಅಳಪೆ ಪಡುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು.

ಭಾನುವಾರ ರಜೆಯಂದು ಒಟ್ಟು ಆರು ಜನ ಸ್ನೇಹಿತರು ಮುಗುಡು ಮೀನು ಹಿಡಿಯಲು ಅಳಪೆ ಪಡ್ಪು ಬಳಿಯ ಕೆರೆಗೆ ತೆರಳಿದ್ದರು.

ಅಷ್ಟರಲ್ಲಿ ವೀಕ್ಷಿತ್ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ವರುಣ್ ಆತನನ್ನು ರಕ್ಷಿಸಲು ತಾನೂ ಇಳಿದು ನೀರುಪಾಲಾಗಿದ್ದಾನೆ. ತಕ್ಷಣ ಇತರ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಕಂಕನಾಡಿ ನಗರ ಠಾಣಾ ಪೊಲೀಸರು, ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಹುಡುಕುವ ಕಾರ್ಯಾಚರಣೆ ನಡೆಸಿದ್ದು, ಸ್ಥಳೀಯರ ಸಹಕಾರದೊಂದಿಗೆ ತುಂಬಾ ಹೊತ್ತು ಹುಡುಕಾಡಿ ಕೊನೆಗೂ ಮೃತದೇಹಗಳನ್ನು ಮೇಲಕ್ಕೆ ತಂದಿದ್ದಾರೆ.

ವರುಣ್ ವೃತ್ತಿಯಲ್ಲಿ ಚಾಲಕನಾಗಿದ್ದರು. ವೀಕ್ಷಿತ್ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ವೀಕ್ಷಿತ್ ಅವರಿಗೆ ತಂದೆ-ತಾಯಿ ಹಾಗೂ ಒಬ್ಬ ಸಹೋದರ ಇದ್ದಾರೆ. ವರುಣ್ ಅವರಿಗೂ ತಂದೆ-ತಾಯಿ ಹಾಗೂ ತಮ್ಮ ಇದ್ದಾನೆ. ಇಬ್ಬರು ಯುವಕರು ಕ್ರೀಯಾಶೀಲರಾಗಿದ್ದು, ಮನೆಯ ಆಧಾರ ಸ್ತಂಭವಾಗಿದ್ದರು. ಇವರ ನಿಧನಕ್ಕೆ ಶಾಸಕ ವೇದವ್ಯಾಸ ಕಾಮತ್ ಕೂಡಾ ಫೇಸ್ ಬುಕ್ ನಲ್ಲಿ ಸಂತಾಪ ವ್ಯಕ್ಯಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!