ಜನ ಮನದ ನಾಡಿ ಮಿಡಿತ

Advertisement

ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು; ಶಾಸಕ ವೇದವ್ಯಾಸ್ ಕಾಮತ್ ಸಂತಾಪ


ಮಂಗಳೂರು: ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಅಳಪೆ ಪಡುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು.

ಭಾನುವಾರ ರಜೆಯಂದು ಒಟ್ಟು ಆರು ಜನ ಸ್ನೇಹಿತರು ಮುಗುಡು ಮೀನು ಹಿಡಿಯಲು ಅಳಪೆ ಪಡ್ಪು ಬಳಿಯ ಕೆರೆಗೆ ತೆರಳಿದ್ದರು.

ಅಷ್ಟರಲ್ಲಿ ವೀಕ್ಷಿತ್ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ವರುಣ್ ಆತನನ್ನು ರಕ್ಷಿಸಲು ತಾನೂ ಇಳಿದು ನೀರುಪಾಲಾಗಿದ್ದಾನೆ. ತಕ್ಷಣ ಇತರ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಕಂಕನಾಡಿ ನಗರ ಠಾಣಾ ಪೊಲೀಸರು, ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಹುಡುಕುವ ಕಾರ್ಯಾಚರಣೆ ನಡೆಸಿದ್ದು, ಸ್ಥಳೀಯರ ಸಹಕಾರದೊಂದಿಗೆ ತುಂಬಾ ಹೊತ್ತು ಹುಡುಕಾಡಿ ಕೊನೆಗೂ ಮೃತದೇಹಗಳನ್ನು ಮೇಲಕ್ಕೆ ತಂದಿದ್ದಾರೆ.

ವರುಣ್ ವೃತ್ತಿಯಲ್ಲಿ ಚಾಲಕನಾಗಿದ್ದರು. ವೀಕ್ಷಿತ್ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ವೀಕ್ಷಿತ್ ಅವರಿಗೆ ತಂದೆ-ತಾಯಿ ಹಾಗೂ ಒಬ್ಬ ಸಹೋದರ ಇದ್ದಾರೆ. ವರುಣ್ ಅವರಿಗೂ ತಂದೆ-ತಾಯಿ ಹಾಗೂ ತಮ್ಮ ಇದ್ದಾನೆ. ಇಬ್ಬರು ಯುವಕರು ಕ್ರೀಯಾಶೀಲರಾಗಿದ್ದು, ಮನೆಯ ಆಧಾರ ಸ್ತಂಭವಾಗಿದ್ದರು. ಇವರ ನಿಧನಕ್ಕೆ ಶಾಸಕ ವೇದವ್ಯಾಸ ಕಾಮತ್ ಕೂಡಾ ಫೇಸ್ ಬುಕ್ ನಲ್ಲಿ ಸಂತಾಪ ವ್ಯಕ್ಯಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!