ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಯ ಪರಿಣಾಮ ಐದು ಮನೆಗಳಿಗೆ ಹಾನಿ….!

ಬಂಟ್ವಾಳ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಯ ಪರಿಣಾಮ ವಿವಿಧ ಗ್ರಾಮಗಳಲ್ಲಿ ಐದು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಮ್ಮುಂಜೆ ಗ್ರಾಮದ ನೆಫಿಸಾ ಕೋಂ ಹಾಮದ್ ಅವರ ಮನೆಗೆ ಭಾಗಶಃ ಹಾನಿಯಾಗಿದೆ. ಮುಡೈಕೋಡಿಕುಳ ಗ್ರಾಮದ ಮೋಂಟೆಮಾರು ನಿವಾಸಿ ಗಿರಿಜ ಕೋಂ ಬಾಬು ಗೌಡ ಅವರ ವಾಸ್ತವ್ಯದ ಮನೆಗೆ ಹೊಂದಿಕೊಂಡಿದ್ದ ಶೀಟ್ ಅಳವಡಿಸಿದ ಉಪಕಟ್ಟಡ ಗಾಳಿ-ಮಳೆಯಿಂದ ಹಾನಿಗೊಳಗಾಗಿದೆ.

ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಹರಿಣಾಕ್ಷಿ ಕೋಂ ಲಕ್ಷ್ಮಣ ಗೌಡ ಅವರ ಕಚ್ಚಾ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಪುದು ಗ್ರಾಮದ ಅಮ್ಮೇಮಾರ್ ಎಂಬಲ್ಲಿ ಇಕ್ಬಾಲ್ ಹಸಿರ್ ಅವರ ಮನೆ ಮಳೆಯಿಂದ ಭಾಗಶಃ ಹಾನಿಗೊಳಗಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಕೋಡಿ ಎಂಬಲ್ಲಿ ಸಾವಿತ್ರಿ ಕೋಂ ರವಿ ಅವರ ಮನೆಯ ಹಿಂಭಾಗದ ಬರೆ ಜರಿದು ಮಣ್ಣು ಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಹಾನಿಗೊಳಗಾದ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ತಗ್ಗು ಪ್ರದೇಶಗಳು ಹಾಗೂ ಗುಡ್ಡದ ಆಸುಪಾಸಿನ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!