ಬಂಟ್ವಾಳ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಯ ಪರಿಣಾಮ ವಿವಿಧ ಗ್ರಾಮಗಳಲ್ಲಿ ಐದು ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಮ್ಮುಂಜೆ ಗ್ರಾಮದ ನೆಫಿಸಾ ಕೋಂ ಹಾಮದ್ ಅವರ ಮನೆಗೆ ಭಾಗಶಃ ಹಾನಿಯಾಗಿದೆ. ಮುಡೈಕೋಡಿಕುಳ ಗ್ರಾಮದ ಮೋಂಟೆಮಾರು ನಿವಾಸಿ ಗಿರಿಜ ಕೋಂ ಬಾಬು ಗೌಡ ಅವರ ವಾಸ್ತವ್ಯದ ಮನೆಗೆ ಹೊಂದಿಕೊಂಡಿದ್ದ ಶೀಟ್ ಅಳವಡಿಸಿದ ಉಪಕಟ್ಟಡ ಗಾಳಿ-ಮಳೆಯಿಂದ ಹಾನಿಗೊಳಗಾಗಿದೆ.
ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಹರಿಣಾಕ್ಷಿ ಕೋಂ ಲಕ್ಷ್ಮಣ ಗೌಡ ಅವರ ಕಚ್ಚಾ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಪುದು ಗ್ರಾಮದ ಅಮ್ಮೇಮಾರ್ ಎಂಬಲ್ಲಿ ಇಕ್ಬಾಲ್ ಹಸಿರ್ ಅವರ ಮನೆ ಮಳೆಯಿಂದ ಭಾಗಶಃ ಹಾನಿಗೊಳಗಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಕೋಡಿ ಎಂಬಲ್ಲಿ ಸಾವಿತ್ರಿ ಕೋಂ ರವಿ ಅವರ ಮನೆಯ ಹಿಂಭಾಗದ ಬರೆ ಜರಿದು ಮಣ್ಣು ಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಹಾನಿಗೊಳಗಾದ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ತಗ್ಗು ಪ್ರದೇಶಗಳು ಹಾಗೂ ಗುಡ್ಡದ ಆಸುಪಾಸಿನ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…