ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಲ್ಲಮಜಲು ಕಲ್ಲು ಕೋರೆಗೆ ಮತ್ತೆ ಗಣಿ ಇಲಾಖೆ ಪರಿಶೀಲನೆ..!

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪಲ್ಲಮಜಲು ಪ್ರದೇಶದಲ್ಲಿರುವ ಕಲ್ಲಿನ ಕೋರೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೋರಾಟಗಾರರು ಸಲ್ಲಿಸಿದ್ದ ಹೊಸ ದೂರಿನ ಆಧಾರದ ಮೇಲೆ ಈ ಪರಿಶೀಲನೆ ನಡೆದಿದ್ದು, ಸ್ಥಳದಲ್ಲಿ ಗ್ರಾಮಸ್ಥರು ಮತ್ತು ಹೋರಾಟಗಾರರಿಂದ ಅಧಿಕಾರಿಗಳಿಗೆ ಹಲವು ಅಹವಾಲುಗಳನ್ನು ಸಲ್ಲಿಸಲಾಯಿತು. ಕಲ್ಲು ಸಿಡಿಸಲು ಅಗತ್ಯ ಅನುಮತಿ ಇಲ್ಲದಿದ್ದರೂ ಕಳೆದ ಸುಮಾರು 17 ವರ್ಷಗಳಿಂದ ಸ್ಫೋಟಕಗಳನ್ನು ಬಳಸಿ ಕಲ್ಲು ಒಡೆದು ಸಾಗಾಟ ನಡೆಸಲಾಗುತ್ತಿದೆ ಎಂಬ ಆರೋಪವನ್ನು ಹೋರಾಟಗಾರರು ಪುನರುಚ್ಚರಿಸಿದ್ದಾರೆ. ಈ ಕುರಿತು ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ನಡೆಸಲಾಗುತ್ತಿದ್ದು, ಪ್ರಕರಣದ ತನಿಖೆ ಜಿಲ್ಲಾಧಿಕಾರಿಗಳ ಹಂತದಲ್ಲಿದೆ ಎಂದು ತಿಳಿದುಬಂದಿದೆ.

ಇದೀಗ ಮತ್ತೊಮ್ಮೆ ಗಣಿ ಇಲಾಖೆಗೆ ಸಲ್ಲಿಸಲಾದ ದೂರಿನ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿ ದಿಲೀಪ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಅಧಿಕಾರಿಗಳಾದ ಪವನ್ ಹಾಗೂ ಮಾದೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಸ್ಥಳದಲ್ಲಿದ್ದ ಹೋರಾಟಗಾರರು ಹಾಗೂ ಗ್ರಾಮಸ್ಥರು ಕಲ್ಲುಕೋರೆಯಿಂದ ಉಂಟಾಗುತ್ತಿರುವ ಪರಿಸರ ಮತ್ತು ಸಾರ್ವಜನಿಕ ಸುರಕ್ಷತೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು. ಈ ಸಂದರ್ಭ ಕೋರೆಯ ಸಮೀಪದ ಮನೆಯೊಂದರ ಮಾಲಕರು, ಗಣಿಗಾರಿಕೆಯಿಂದ ಗುಡ್ಡ ಕುಸಿದು ತಮ್ಮ ಮನೆಗೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳಿಗೆ ತಿಳಿಸಿದರು. ಈ ಸಂಬAಧ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪ್ರತ್ಯೇಕ ದೂರು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆಯ ವಿವರಗಳನ್ನು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಿದ್ದು, ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!