ಕೇರಳದ ಐತಿಹಾಸಿಕ ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ನವೀಕರಣ ಕಾಮಗಾರಿ ವೇಳೆ ಶತಮಾನ ಹಳೆಯ ಗಡಿಯಾರ ಗೋಪುರ ಗುರುವಾರ ಏಕಾಏಕಿ ಕುಸಿದಿದ್ದು, ಭಾರೀ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ಘಟನೆ ವೇಳೆ ಯಾವುದೇ ಪ್ರಯಾಣಿಕರು ಸಮೀಪದಲ್ಲಿರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಎರಡನೇ ಪ್ಲಾಟ್ಫಾರ್ಮ್ ಸಮೀಪದಲ್ಲಿದ್ದ ಗೋಪುರ ಪುನರ್ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಎರಡು ಭಾಗಗಳಾಗಿ ಒಡೆದು ಮೂರನೇ ರೈಲು ಹಳಿಯ ಮೇಲೆ ಹಾಗೂ ಪ್ಲಾಟ್ಫಾರ್ಮ್ನ ಭಾಗದ ಮೇಲೆ ಕುಸಿದು ಬಿದ್ದಿದೆ. ಘಟನೆ ಸಂಭವಿಸಿದ ವೇಳೆ ಮೂರನೇ ಹಳಿಯಲ್ಲಿ ರೈಲು ನಿಂತಿದ್ದರೂ, ಅವಶೇಷಗಳು ರೈಲಿನ ಪಕ್ಕಕ್ಕೆ ಬಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಳೆಯ ಕಟ್ಟಡ ದುರ್ಬಲಗೊಂಡಿದ್ದು, ಇದೇ ಕುಸಿತಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಳೆ ಮತ್ತು ತೇವಾಂಶದಿಂದ ಕಟ್ಟಡದ ಬಲ ಕುಂದಿದಿತ್ತೇ ಎಂಬ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಬಳಿಕ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವಶೇಷಗಳನ್ನು ತೆರವುಗೊಳಿಸಿದ್ದು, ಅವಶೇಷಗಳಡಿ ಯಾರೂ ಸಿಲುಕಿಲ್ಲ ಎಂದು ಖಚಿತಪಡಿಸಿದ್ದಾರೆ. ರೈಲ್ವೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು ರೂ.450 ಕೋಟಿ ವೆಚ್ಚದಲ್ಲಿ ಕೋಝಿಕ್ಕೋಡ್ ರೈಲು ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಗೋಪುರ ಕುಸಿದಿರುವುದು ಕಾಮಗಾರಿ ಸುರಕ್ಷತೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನವೀಕರಣ ಮತ್ತು ನೆಲಸಮ ಕಾಮಗಾರಿಗಳನ್ನು ಸುರಕ್ಷತಾ ನಿಯಮಾನುಸಾರವೇ ನಡೆಸಲಾಗುತ್ತಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…