ಕಾಸರಗೋಡಿನ ಪ್ರಸಿದ್ಧ ಶ್ರೀ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಪಾರಂಪರಿಕ ಅರ್ಚಕರಾಗಿದ್ದ ವೇಣುಗೋಪಾಲ ಕಲ್ಲೂರಾಯ (78) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಅವರು ಮಧೂರು ಮೇಲಿನ ಮನೆ ನಿವಾಸಿಯಾಗಿದ್ದರು. ಶನಿವಾರ ಬೆಳಿಗ್ಗೆ ಕುಟುಂಬದವರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿತು.
ವೇಣುಗೋಪಾಲ ಕಲ್ಲೂರಾಯ ಅವರು ಹಲವು ವರ್ಷಗಳಿಂದ ಮಧೂರು ಕ್ಷೇತ್ರದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿ ಭಕ್ತರ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ಧಾರ್ಮಿಕ ಸೇವೆಯೊಂದಿಗೆ ಸಮಾಜಮುಖಿ ಚಟುವಟಿಕೆಗಳಲ್ಲಿಯೂ ಸಕ್ರಿಯರಾಗಿದ್ದ ಅವರು ಶಿವಳ್ಳಿ ಬ್ರಾಹ್ಮಣ ಸಭೆ ಕಾಸರಗೋಡು ವಲಯ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಸಮುದಾಯದ ಸಂಘಟನೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದರು.
ನಿವೃತ್ತ ಶಿಕ್ಷಕರಾಗಿದ್ದ ಅವರು ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ಸಂಗೀತ ವಿದ್ವಾಂಸರಾಗಿಯೂ ಹೆಸರುವಾಸಿಯಾಗಿದ್ದರು. ಪೌರೋಹಿತ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಮತ್ತು ಗೌರವ ಗಳಿಸಿದ್ದ ಅವರು ತಮ್ಮ ಸೇವಾ ಮನೋಭಾವದಿಂದ ಸಮಾಜದಲ್ಲಿ ವಿಶಿಷ್ಟ ಸ್ಥಾನವನ್ನು ಸಂಪಾದಿಸಿದ್ದರು.
ಮೃತರು ಪತ್ನಿ ಕಮಲಾಕ್ಷಿ (ಸೀಮಾ), ಪುತ್ರರಾದ ವಸಂತ ಕಲ್ಲೂರಾಯ (ಮಧೂರು ಕ್ಷೇತ್ರದ ಅರ್ಚಕ) ಹಾಗೂ ಕಿಶೋರ್ (ಹರಿ ಕೇಶವ ಕಲ್ಲೂರಾಯ), ಉಡುಪಿ ಕಾಲೇಜಿನ ಉಪನ್ಯಾಸಕ, ಸೊಸೆ ಕಾವ್ಯಶ್ರೀ, ಸಹೋದರ ಬಾಲಚಂದ್ರ ಕಲ್ಲೂರಾಯ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…