ರಾಜ್ಯ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ರಾಮಚಂದ್ರೇಗೌಡ ಅವರು ಇಂದು ನಿಧನರಾಗಿದ್ದಾರೆ.

ಅವರಿಗೆ ವಯೋ ಸಹಜ ಅನಾರೋಗ್ಯ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ನೀಡಿ ಕಾರ್ಯನಿರ್ವಹಿಸಿದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡ ಅವರು ಒಬ್ಬರಾಗಿದ್ದರು. ಪಕ್ಷದ ಆರಂಭಿಕ ದಿನಗಳಿಂದಲೇ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಬಿಜೆಪಿ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.



