ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ, ರಾಜಶ್ರೀ ಮುಗೋಳಖೋಡ ಮೃತ ದುರ್ದೈವಿಗಳಾಗಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಅವರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



