ಬೆಳಗಾವಿಯ ಪೊಲೀಸ್ ಕಮೀಷನರ್ ಕಚೇರಿ ಪಕ್ಕದಲ್ಲೇ ಕ್ಲಬ್ ನಲ್ಲಿ ರಮ್ಮಿ ಆಡುತ್ತಿದ್ದ ವ್ಯಕ್ತಿಯ ಮೇಲೆ ಫೈರಿಂಗ್ ನಡೆದಿದೆ.
ಬೆಳಗಾವಿ ನಗರದ ಜಿಮಖಾನ್ ಕ್ಲಬ್ನಲ್ಲಿ ದುಷ್ಕರ್ಮಿಗಳು ಸುರೇಶ್ ಜಾಲಗಾರ ಎಂಬಾತನ ತಲೆಗೆ ಗನ್ ನಿಂದ ಕುಕ್ಕಿ ಬಳಿಕ ಫೈರಿಂಗ್ ನಡೆಸಿದ್ದಾರೆ. ಫೈರಿಂಗ್ ಆಗುವ ಮುನ್ನವೇ ಸುರೇಶ್ ದುಷ್ಕರ್ಮಿಗಳನ್ನು ತಳ್ಳಿ ಎಸ್ಕೇಪ್ ಆಗಿದ್ದಾರೆ. ಸುರೇಶ್ ಪರಾರಿಯಾದ ಬಳಿಕ ಹೊರ ಬಂದು ದುಷ್ಕರ್ಮಿಗಳು ಮತ್ತೆ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಐದು ಜನರ ತಂಡ ಜಿಮ್ ಖಾನ ಕ್ಲಬ್ ಗೆ ಬಂದಿತ್ತು. ಇಬ್ಬರು ಹೊರ ನಿಂತಿದ್ದರೆ, ಮೂರು ಜನರು ಒಳ ಬಂದು ಹತ್ಯೆಗೆ ಯತ್ನ ನಡೆಸಿದ್ದರು. ಸ್ಥಳಕ್ಕೆ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಫುಲ್ ಪಾಟೀಲ್ ಎಂಬಾತನ ಮೇಲೆ ಈ ಹಿಂದೆ ಸುರೇಶ್ ಜಾಲಗಾರ ಫೈರಿಂಗ್ ಮಾಡಿದ್ದ. ಇದರ ಸೇಡು ತೀರಿಸಿಕೊಳ್ಳಲು ಇಂದು ಪ್ರಫುಲ್ ಪಾಟೀಲ್ ತನ್ನ ಕಡೆಯ ಹುಡುಗರಿಂದ ಹತ್ಯೆಗೆ ಯತ್ನ ಮಾಡಿದ್ದಾರೆನ್ನಲಾಗಿದೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…