ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಉಕ್ಕುಡ ಬಳಿ ನಡೆದಿದೆ.
ಗಾಯಾಳುಗಳನ್ನು ಪುತ್ತೂರು ಮೂಲದ ದಿನೇಶ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ. ವಿಟ್ಲ-ಅಡ್ಯನಡ್ಕ ರಸ್ತೆಯ ಉಕ್ಕುಡ ದರ್ಬೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಉಕ್ಕುಡ ಕಡೆಯಿಂದ ಕುದ್ದುಪದವು ಕಡೆಗೆ ಸಂಚರಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಟಿಪ್ಪರ್ ಲಾರಿಯ ಮುಂಭಾಗ ಜಖಂಗೊಂಡಿದ್ದು, ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರೂ ಕ್ಯಾಬಿನ್ನಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಗಾಯಾಳುಗಳನ್ನು ಲಾರಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ. ಅಪಘಾತಕ್ಕೀಡಾದ ಲಾರಿ ಉಪ್ಪಿನಂಗಡಿ ನಿವಾಸಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ…