ಮುಲ್ಕಿ,: ನೆಹರು ಯುವ ಕೇಂದ್ರ ಮಂಗಳೂರು ,ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು , ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿಗೆ ವಿಜೇತ ಯುವಕ ಸಂಘ(ರಿ.) ತೋಕೂರು, ರೋಟರಿ ಸಮುದಾಯದಳ ತೋಕೂರು ಇವರ ಜಂಟಿ ಸಹಯೋಗದಲ್ಲಿ ತೋಕೂರಿನ ಯುವಕ ಸಂಘದ ಸ್ವರ್ಣ ಸಭಾಂಗಣದಲ್ಲಿ ಆಟಿದ ನೆಂಪು ಕಾರ್ಯಕ್ರಮ ನೆರವೇರಿತು.
ನಮ್ಮ ತುಳುನಾಡಿನ ವಿಶಿಷ್ಟ ಆಚರಣೆಯ ಮಹತ್ವವನ್ನು ನಮ್ಮ ಮಕ್ಕಳಿಗೆ ವೈಜ್ಞಾನಿಕ ರೀತಿಯಲ್ಲಿ ತಿಳಿಯಪಡಿಸಿ ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋವಿಂದ ದಾಸ್ ಕಾಲೇಜಿನ ಉಪನ್ಯಾಸಕಿಯಾದ ಶ್ರೀಮತಿ ಪಲ್ಲವಿ ರಾಜೇಶ್ ಇವರು ಈ ಸಂದರ್ಭದಲ್ಲಿ ಹೇಳಿದರು. ಶ್ರೀಮತಿ ರತ್ನ ಭಂಡಾರಿ ಆಟಿಕಳೆಂಜದ ಹಾಡು ಹೇಳಿ ಎಲ್ಲರನ್ನು ರಂಜಿಸಿದರು. ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷೆ ಶ್ರೀಮತಿ ಯಶೋಧ ಪಿ ರಾವ್ ಪ್ರಸ್ತಾವನೆ ಗೈದರು. ಮಹಿಳಾಮಂಡಲದ ಅಧ್ಯಕ್ಷೆ ಶ್ರೀಮತಿ ಅನುಪಮಾ ಎ ರಾವ್ ಸ್ವಾಗತಿಸಿ ಯುವಕ ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಶೆಟ್ಟಿಗಾರ್ ವಂದಿಸಿದರು. ಮಹಿಳಾಮಂಡಲದ ಹಿರಿಯ ಸದಸ್ಯೆ ವಿನೋದ ಭಟ್ ಕಾರ್ಯಕ್ರಮ ನಿರೂಪಿಸಿದರು. ನೂರಕ್ಕೂ ಹೆಚ್ಚು ಮಂದಿ ಆಟಿದ ನೆಂಪು ಕಾರ್ಯಕ್ರಮದಲ್ಲಿ ಭಾಗವಹಿಸಿ ಭೋಜನವನ್ನು ಸವಿದರು.
ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು…
ಬಹಾದ್ದೂರ್ ಗ್ರೂಪ್ ಆಫ್ ಕಂಪೆನಿ ಹಾಗೂ ಬಹಾದ್ದೂರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದ ಅಲ್…
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್…
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ…
ಮಾದಕ ದ್ರವ್ಯಗಳ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ…
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು…