ಮುಲ್ಕಿ,: ನೆಹರು ಯುವ ಕೇಂದ್ರ ಮಂಗಳೂರು ,ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು , ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿಗೆ ವಿಜೇತ ಯುವಕ ಸಂಘ(ರಿ.) ತೋಕೂರು, ರೋಟರಿ ಸಮುದಾಯದಳ ತೋಕೂರು ಇವರ ಜಂಟಿ ಸಹಯೋಗದಲ್ಲಿ ತೋಕೂರಿನ ಯುವಕ ಸಂಘದ ಸ್ವರ್ಣ ಸಭಾಂಗಣದಲ್ಲಿ ಆಟಿದ ನೆಂಪು ಕಾರ್ಯಕ್ರಮ ನೆರವೇರಿತು.
ನಮ್ಮ ತುಳುನಾಡಿನ ವಿಶಿಷ್ಟ ಆಚರಣೆಯ ಮಹತ್ವವನ್ನು ನಮ್ಮ ಮಕ್ಕಳಿಗೆ ವೈಜ್ಞಾನಿಕ ರೀತಿಯಲ್ಲಿ ತಿಳಿಯಪಡಿಸಿ ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋವಿಂದ ದಾಸ್ ಕಾಲೇಜಿನ ಉಪನ್ಯಾಸಕಿಯಾದ ಶ್ರೀಮತಿ ಪಲ್ಲವಿ ರಾಜೇಶ್ ಇವರು ಈ ಸಂದರ್ಭದಲ್ಲಿ ಹೇಳಿದರು. ಶ್ರೀಮತಿ ರತ್ನ ಭಂಡಾರಿ ಆಟಿಕಳೆಂಜದ ಹಾಡು ಹೇಳಿ ಎಲ್ಲರನ್ನು ರಂಜಿಸಿದರು. ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷೆ ಶ್ರೀಮತಿ ಯಶೋಧ ಪಿ ರಾವ್ ಪ್ರಸ್ತಾವನೆ ಗೈದರು. ಮಹಿಳಾಮಂಡಲದ ಅಧ್ಯಕ್ಷೆ ಶ್ರೀಮತಿ ಅನುಪಮಾ ಎ ರಾವ್ ಸ್ವಾಗತಿಸಿ ಯುವಕ ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಶೆಟ್ಟಿಗಾರ್ ವಂದಿಸಿದರು. ಮಹಿಳಾಮಂಡಲದ ಹಿರಿಯ ಸದಸ್ಯೆ ವಿನೋದ ಭಟ್ ಕಾರ್ಯಕ್ರಮ ನಿರೂಪಿಸಿದರು. ನೂರಕ್ಕೂ ಹೆಚ್ಚು ಮಂದಿ ಆಟಿದ ನೆಂಪು ಕಾರ್ಯಕ್ರಮದಲ್ಲಿ ಭಾಗವಹಿಸಿ ಭೋಜನವನ್ನು ಸವಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…