ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ವಿಷಸೇವನೆ ಮಾಡಿದ್ದರಿಂದ ಬೆಳ್ತಂಗಡಿ ಒಡಿಲ್ನಾಳ ನಿವಾಸಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ, ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನಲೆ ಆತನನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ.

ಇನ್ನು ಆತ ಸಂಪೂರ್ಣ ಸುಧಾರಣೆಯಾದ ನಂತರ ಅಂದರೆ ಡಿಸ್ಚಾರ್ಜ್ ಆಗುವ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ನ್ಯಾಯಲಯಕ್ಕೆ ಹಾಜರುಪಡಿಸುತ್ತಾರೆ ಅನ್ನುವ ಮಾಹಿತಿಗಳು ತಿಳಿದುಬಂದಿದೆ.



