ಇತರೆ

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್, ಇನ್ನಿತರ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.

ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಉಪ ವಿಭಾಗದ ಎಸಿಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕೋಟೆಕಾರು ಮತ್ತು ಕೋಣಾಜೆ ಬಂಟರ ಸಂಘದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಕೋಣಾಜೆ, ಉಳ್ಳಾಲ, ಕಂಕನಾಡಿ, ಪಾಂಡೇಶ್ವರ, ಬಂದರು ಠಾಣೆ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದೆ. ಉಳ್ಳಾಲದ ಕೋಟೆಕಾರಿನಲ್ಲಿ ಮಂಗಳೂರು ಎಸ್ ಡಿ ಎಂ ಕಾಲೇಜು, ನಿಟ್ಟೆ ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ಸೈಂಟ್ ಅಲೋಶಿಯಸ್, ಪಿಎ ಕಾಲೇಜು, ಬ್ಯಾರೀಸ್ ಇನ್ ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಮತ್ತು ಕೆನರಾ ಕಾಲೇಜಿಗೆ ಸೇರಿದ 72 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.

ಕೋಣಾಜೆಯಲ್ಲಿ ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಸೇರಿದ ಎರಡು ಬಸ್ ಗಳನ್ನು ನಿಲ್ಲಿಸಿ 87 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ್ದು ಎಲ್ಲರೂ ನೆಗೆಟಿವ್ ಆಗಿದ್ದಾರೆ. ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಸ್ಥಳಕ್ಕೆ ಕೊಂಡೊಯ್ದು ಸಂಜೆ 4.30ರಿಂದ 6 ಗಂಟೆ ನಡುವೆ ತಪಾಸಣಾ ಕಾರ್ಯ ಮಾಡಲಾಗಿದೆ. ನಿರಂತರ ತಪಾಸಣೆ ಮತ್ತು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಪಾಸಿಟಿವ್ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಡ್ರಗ್ಸ್ ವ್ಯಸನಕ್ಕೆ ತುತ್ತಾಗುವ ಸಂಖ್ಯೆಯೂ ಇಳಿಕೆಯಲ್ಲಿದೆ. ಆದರೂ ಡ್ರಗ್ಸ್ ಫ್ರೀ ಆಗುವಲ್ಲಿ ಬಹಳಷ್ಟು ಪ್ರಯತ್ನ ಆಗಬೇಕಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಪಾಸಿಟಿವ್ ಆಗಿರುವ ಒಬ್ಬ ವಿದ್ಯಾರ್ಥಿಯನ್ನು ಕಾನೂನು ರೀತಿಯ ಕ್ರಮ ಕೈಗೊಂಡ ಬಳಿಕ ಕೌನ್ಸೆಲಿಂಗ್ ಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…

39 mins ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…

46 mins ago

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್‌ಗಳ ಭರ್ಜರಿ ಜಯ ಸಾಧಿಸಿದೆ. 211 ರನ್‌ಗಳ ಗುರಿ…

1 hour ago

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…

2 hours ago

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

2 days ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

2 days ago