ಕ್ರೀಡೆ

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ ಫುಟ್‌ಬಾಲ್ ಸಂಸ್ಥೆ ಹಾಗೂ ಹಲವು ಆಟಗಾರರ ವಿರುದ್ಧ ಫಿಫಾ ಶಿಸ್ತು ಕ್ರಮ ಆರಂಭಿಸಿದೆ.

ಸ್ಪೇನ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋಲಿನ ಬಳಿಕ ಮೈದಾನದಲ್ಲೇ ಆಟಗಾರರ ನಡುವೆ ಭಾರಿ ವಾಗ್ವಾದ ಮತ್ತು ತಳ್ಳಾಟ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಲಿಯಾಂಡ್ರೊ ಪರೇಡೆಸ್, ನಾಹ್ಯುಯೆಲ್ ಮೊಲಿನಾ, ಥಿಯಾಗೊ ಅಲ್ಮಾಡಾ ಸೇರಿದಂತೆ ಹಲವು ಆಟಗಾರರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಹಾಯಕ ಕೋಚ್ ರೋಬರ್ಟೊ ಅಯಾಲಾ ವಿರುದ್ಧವೂ ಕ್ರಮಕ್ಕೆ ಮುಂದಾಗಿದೆ. ಇದರ ಜೊತೆಗೆ, ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಬಳಿಕ ಅರ್ಜೆಂಟೀನಾ ಆಟಗಾರರು “ಲಾಸ್ ಮಾಲ್ವಿನಾಸ್ ಸನ್ ಅರ್ಜೆಂಟೀನಾಸ್” ಎಂಬ ರಾಜಕೀಯ ಸಂದೇಶವಿರುವ ಬ್ಯಾನರ್ ಪ್ರದರ್ಶಿಸಿದ್ದು ಕೂಡ ಫಿಫಾ ತನಿಖೆಗೆ ಕಾರಣವಾಗಿದೆ.

ಕ್ರೀಡಾಂಗಣದಲ್ಲಿ ರಾಜಕೀಯ ಸಂದೇಶಗಳನ್ನು ಪ್ರದರ್ಶಿಸುವುದು ಫಿಫಾ ನಿಯಮಗಳಿಗೆ ವಿರುದ್ಧವಾಗಿದೆ. ಅಷ್ಟೇ ಅಲ್ಲ, ಅರ್ಜೆಂಟೀನಾ ಫುಟ್‌ಬಾಲ್ ಸಂಸ್ಥೆ ವಿರುದ್ಧವೂ ಅಭಿಮಾನಿಗಳ ದುರ್ವರ್ತನೆ, ಜನಾಂಗೀಯ ನಿಂದನೆ, ಮೈದಾನಕ್ಕೆ ವಸ್ತು ಎಸೆದ ಆರೋಪ ಹಾಗೂ ಪಂದ್ಯವನ್ನು ತಡವಾಗಿ ಆರಂಭಿಸಿದ ಆರೋಪಗಳಡಿ ಪ್ರಕರಣ ದಾಖಲಾಗಿದೆ.

ಈ ಎಲ್ಲ ಪ್ರಕರಣಗಳ ವಿಚಾರಣೆ ಬಳಿಕ, ಅರ್ಜೆಂಟೀನಾ ಆಟಗಾರರು ಹಾಗೂ ಫುಟ್‌ಬಾಲ್ ಸಂಸ್ಥೆಗೆ ದಂಡ, ಅಮಾನತು ಅಥವಾ ಇತರೆ ಕಠಿಣ ಶಿಸ್ತು ಕ್ರಮ ವಿಧಿಸುವ ಸಾಧ್ಯತೆ ಇದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

44 mins ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

1 hour ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

1 hour ago

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…

19 hours ago

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…

19 hours ago

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…

1 day ago