ಜನ ಮನದ ನಾಡಿ ಮಿಡಿತ

Advertisement

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ವರದಿಯಾಗಿದೆ.

ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತ ರೈತ ಶಿವಣ್ಣ ಅವರು ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮ ಪಂಚಾಯಿತಿಗೆ ಒತ್ತಾಯಿಸಿದ್ದಾರೆ. ಬೀರತಮ್ಮನಹಳ್ಳಿಯ ಶಿವಣ್ಣ ಅವರು ತಮ್ಮ ಪುತ್ರನ ಹೆಸರಿನಲ್ಲಿ ಗ್ರಾಮ ಪಂಚಾಯಿತಿಯಿಂದ ಕೆರೆಯಲ್ಲಿ ಮೀನು ಹಿಡಿಯುವ ಗುತ್ತಿಗೆ ಪಡೆದಿದ್ದರು. ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಕೆರೆಗೆ ಮೀನು ಮರಿಗಳನ್ನು ಬಿಟ್ಟು ಸಾಕಣೆ ಮಾಡಿದ್ದರು. ಇತ್ತೀಚೆಗೆ ಕೆರೆಯಲ್ಲಿ ನೀರು ಕಡಿಮೆಯಾದಾಗ ಮೀನು ಹಿಡಿಯಲು ಹೋದಾಗ ಈ ಅನಾಹುತ ಬೆಳಕಿಗೆ ಬಂದಿದೆ. 3 ದಿನಗಳ ಹಿಂದೆ ಕಿಡಿಗೇಡಿಗಳು ಕೆರೆಗೆ ಕಳೆನಾಶಕ ಅಥವಾ ಕ್ರಿಮಿನಾಶಕ ಬೆರೆಸಿದ್ದರಿಂದ ಮೀನುಗಳು ಸಾಮೂಹಿಕವಾಗಿ ಮೃತಪಟ್ಟಿವೆ. ಮೀನು ಸಾಕಣೆಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ತಮಗೆ ಸೂಕ್ತ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇನ್‌ಸ್ಪೆಕ್ಟರ್ ಸಂತೋಷ್ ಕಶ್ಯಪ್, ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿರುವ ಬಗ್ಗೆ ದೂರು ಬಂದಿದೆ. ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಕೆರೆಯ ಸುತ್ತಮುತ್ತಲ ಜಮೀನುಗಳಲ್ಲಿ ಬೆಳೆಗಳಿಗೆ ಸಿಂಪಡಿಸಿದ್ದ ಕ್ರಿಮಿನಾಶಕವು ಕೆರೆ ನೀರಿಗೆ ಸೇರಿ ಮೀನುಗಳು ಅಸ್ವಸ್ಥಗೊಂಡು ಮೃತಪಟ್ಟಿವೆಯೋ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

error: Content is protected !!