ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ವರದಿಯಾಗಿದೆ.
ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತ ರೈತ ಶಿವಣ್ಣ ಅವರು ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮ ಪಂಚಾಯಿತಿಗೆ ಒತ್ತಾಯಿಸಿದ್ದಾರೆ. ಬೀರತಮ್ಮನಹಳ್ಳಿಯ ಶಿವಣ್ಣ ಅವರು ತಮ್ಮ ಪುತ್ರನ ಹೆಸರಿನಲ್ಲಿ ಗ್ರಾಮ ಪಂಚಾಯಿತಿಯಿಂದ ಕೆರೆಯಲ್ಲಿ ಮೀನು ಹಿಡಿಯುವ ಗುತ್ತಿಗೆ ಪಡೆದಿದ್ದರು. ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಕೆರೆಗೆ ಮೀನು ಮರಿಗಳನ್ನು ಬಿಟ್ಟು ಸಾಕಣೆ ಮಾಡಿದ್ದರು. ಇತ್ತೀಚೆಗೆ ಕೆರೆಯಲ್ಲಿ ನೀರು ಕಡಿಮೆಯಾದಾಗ ಮೀನು ಹಿಡಿಯಲು ಹೋದಾಗ ಈ ಅನಾಹುತ ಬೆಳಕಿಗೆ ಬಂದಿದೆ. 3 ದಿನಗಳ ಹಿಂದೆ ಕಿಡಿಗೇಡಿಗಳು ಕೆರೆಗೆ ಕಳೆನಾಶಕ ಅಥವಾ ಕ್ರಿಮಿನಾಶಕ ಬೆರೆಸಿದ್ದರಿಂದ ಮೀನುಗಳು ಸಾಮೂಹಿಕವಾಗಿ ಮೃತಪಟ್ಟಿವೆ. ಮೀನು ಸಾಕಣೆಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ತಮಗೆ ಸೂಕ್ತ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್, ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿರುವ ಬಗ್ಗೆ ದೂರು ಬಂದಿದೆ. ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಕೆರೆಯ ಸುತ್ತಮುತ್ತಲ ಜಮೀನುಗಳಲ್ಲಿ ಬೆಳೆಗಳಿಗೆ ಸಿಂಪಡಿಸಿದ್ದ ಕ್ರಿಮಿನಾಶಕವು ಕೆರೆ ನೀರಿಗೆ ಸೇರಿ ಮೀನುಗಳು ಅಸ್ವಸ್ಥಗೊಂಡು ಮೃತಪಟ್ಟಿವೆಯೋ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…