ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಮಂಗಳೂರು ನಗರದಲ್ಲಿನ 28 ಪ್ರಮುಖ ಜಂಕ್ಷನ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕ್ಯಾಮರಾಗಳು ವಾಹನ ದಟ್ಟಣೆಗೆ ಅನುಗುಣವಾಗಿ ಸಿಗ್ನಲ್‌ಗಳನ್ನು ಸ್ವಯಂಚಾಲಿತವಾಗಿ ನಿಯಂತ್ರಿಸುವ ಮೂಲಕ ಸಂಚಾರ ಸುಗಮಗೊಳಿಸುತ್ತಿವೆ. ಇದಲ್ಲದೆ ಸಂಚಾರಿ ಪೊಲೀಸ್ ಇಲಾಖೆಯು ವಿವಿಧ ಸ್ಥಳಗಳಲ್ಲಿ ಹೆಚ್ಚುವರಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ಸಂಚಾರ ನಿಯಮ ಉಲ್ಲಂಘನೆ, ಅಪಘಾತ ತಡೆ ಹಾಗೂ ಅಪರಾಧ ತನಿಖೆಗೆ ಈ ವ್ಯವಸ್ಥೆ ಪರಿಣಾಮಕಾರಿಯಾಗಿ ನೆರವಾಗುತ್ತಿದೆ.

ದರೋಡೆ, ಕೊಲೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳನ್ನು ಪತ್ತೆಹಚ್ಚುವಲ್ಲೂ ಕ್ಯಾಮರಾಗಳು ಪ್ರಮುಖ ಪಾತ್ರ ವಹಿಸಿವೆ. ಮಂಗಳೂರು ನಗರದಲ್ಲಿ ಇನ್ನು ಮುಂದೆ ಮಿತಿ ಮೀರಿದ ವೇಗದಿಂದ ವಾಹನ ಚಾಲನೆಗೂ ದಂಡ ವಿಧಿಸಲಾಗುವುದು. ಎಐ ಕ್ಯಾಮರಾಗಳ ಮೂಲಕ ವೇಗ ಉಲ್ಲಂಘನೆ ಪತ್ತೆ ಮಾಡಿ ಪ್ರಕರಣ ದಾಖಲಿಸಲಾಗುತ್ತಿದ್ದು, ‘ಇ-ವಾಹನ’ ವ್ಯವಸ್ಥೆ ಜಾರಿಯಾದ ಹಿನ್ನೆಲೆಯಲ್ಲಿ ಹೊರರಾಜ್ಯದ ವಾಹನಗಳಿಗೂ ನೋಟಿಸ್ ಜಾರಿಗೊಳಿಸಿ ದಂಡ ವಸೂಲಿ ಮಾಡಬಹುದಾಗಿದೆ. ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಸಿಸಿ ಕ್ಯಾಮರಾಗಳು ಸುಸ್ಥಿತಿಯಲ್ಲಿದ್ದು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ನಿರಂತರವಾಗಿ ದಾಖಲಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವೇಗ ಮಿತಿ ಉಲ್ಲಂಘನೆ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

ಕರಂಬಾರು ಶಾಲೆಯಲ್ಲಿ ‘ಆಟಿಡೊಂಜಿ ದಿನ’; ಆಟಿ ಆಹಾರದ ಮಹತ್ವ ಸಾರಿದ ಲೋಕೇಶ್ ಪೂಜಾರಿ

error: Content is protected !!