ಕಾಸರಗೋಡು: ಮಣಿ ಕೃಷ್ಣ ಸ್ವಾಮಿ ಅಕಾಡಮಿ ಯ ಶ್ರೀ ಕ್ಷೇತ್ರ ಧರ್ಮಸ್ಥಳ ಕೃತಿಗಳಾಧರಿತ 14″ನೇ ಸಂಗೀತ ಕಛೇರಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯಿತು. ವಿದ್ವಾನ್ ಕಲ್ಮಾಡಿ ಸದಾಶಿವ ಆಚಾರ್ಯ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಗಡಿನಾಡು ಕಾಸರಗೋಡಿನಲ್ಲಿ ಚಾರಿತ್ರಿಕ ಕಾರ್ಯಕ್ರಮ ಆಯೋಜಿಸಿ ಸಿರಿಬಾಗಿಲು ಪ್ರತಿಷ್ಠಾನದ ಯೋಜನೆ ಯೋಚನೆ ಅದ್ವಿತೀಯವಾದುದು. ಸಾಂಸ್ಕೃತಿಕ ಹಾಗು ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕಾಯಕ ಪ್ರತಿಷ್ಠಾನ ನಡೆಸುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದ ಕೃತಿ ಗಳ ನ್ನು ಆಧಾರಿಸಿ ಮಣಿಕೃಷ್ಣ ಸ್ವಾಮಿ ಅಕಾಡಮಿ ಯು ಇಂತಹ ಅಪೂರ್ವ ವಾದ ಕೊಡುಗೆ ಸಮಾಜಕ್ಕೆ ನೀಡುತ್ತಿದೆ. ಮಂಜುನಾಥ ಸ್ವಾಮಿಯು ಅನುಗ್ರಹಿಸಲಿ ಎಂದು ಹರಸಿದರು. ಶ್ರೀ ಕಲ್ಮಾಡಿ ಸದಾಶಿವ ಆಚಾರ್ಯ ರವರು ಅಪಾರ ಶಿಷ್ಯ ವೃಂದ ವನ್ನು ಹೊಂದಿದ ಸಂಗೀತ ಕ್ಷೇತ್ರದ ಕಾಸರಗೋಡಿನ ಹಿರಿಯ ವಿದ್ವಾಂಸ ರಾಗಿದ್ದಾರೆ.
ಧಾರ್ಮಿಕ ಮುಂದಾಳು ಶ್ರೀ ವೆಂಕಟ್ರಮಣ ಹೊಳ್ಳ ಕಾಸರಗೋಡು, ನಿವೃತ್ತ ಪ್ರಾಧ್ಯಾಪಕ ಪ್ರೋ. ಶ್ರೀನಾಥ್, ಶ್ರೀ ಮೋಹನದಾಸ್ ಶೆಟ್ಟಿ ಸಿರಿಬಾಗಿಲು, ಸಂಗೀತ ವಿಧುಷಿ ಶ್ರೀಮತಿ ರಾಧಾ ಮುರಳೀಧರನ್,ಶ್ರೀ ಲಕ್ಷ್ಮೀ ನಾರಾಯಣ ಕಾವುಮಠ ಉಪಸ್ಥಿತರಿದ್ದರು.
ಹಲವು ಕ್ಷೇತ್ರದಲ್ಲಿ ಸಂಗೀತ ಕಾರ್ಯಾಗಾರ ನಡೆಸಿದ್ದೇವೆ. ಯಕ್ಷಗಾನ ಕ್ಷೇತ್ರದ ಪ್ರಧಾನ ಕೇಂದ್ರವಾಗಿರುವ ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇದೇ ಪ್ರಥಮ. ನಮ್ಮ ಸುಯೋಗ ವೆಂದು ಮಣಿ ಕೃಷ್ಣ ಸ್ವಾಮಿ ಅಕಾಡಮಿಯ ಕಾರ್ಯದರ್ಶಿ ಶ್ರೀ ನಿತ್ಯಾನಂದ ರಾವ್ ಪೇಜಾವರ ಅಂದರು.
ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರು ಸ್ವಾಗತಿಸಿದರು.
ಆ ಬಳಿಕ ಶ್ರೇಯಾ ಕೊಳತ್ತಾಯ ಸುರತ್ಕಲ್, ಉಷಾ ರಾಮಕೃಷ್ಣ ಭಟ್ ಕಿನ್ನಿಗೊಳಿ, ಶರಣ್ಯಾ ಕೆ.ಯಸ್. ಸುರತ್ಕಲ್, ಸುಮೇಧಾ ಕೆ.ಯನ್.ಮೇಧಾ ಉಡುಪ ಮಂಗಳೂರು ಇವರಿಂದ ಮಂಜುನಾದ ಸಂಗೀತ ಕಛೇರಿ ನಡೆಯಿತು, ವಯಲಿನ್ ನಲ್ಲಿ ತನ್ಮಯಿ ಉಪ್ಪಂಗಳ, ಮೃದಂಗ ದಲ್ಲಿ ಕೌಶಿಕ್ ರಾಮಕೃಷ್ಣನ್ ಕಾಸರಗೋಡು ಸಹಕರಿಸಿದರು .
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…