ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಶಾಸಕ ಹಾಗೂ ಸಚಿವರಿಗೂ AI ಕಾರ್ಯದರ್ಶಿಗಳನ್ನು ನೇಮಿಸುವ ಅಗತ್ಯ ಎದುರಾಗಲಿದೆ ಎಂದೂ ಅವರು ಅಭಿಪ್ರಾಯಪಟ್ಟರು.
ನಗರದ ಐಟಿಸಿ ವಿಂಡ್ಸರ್ ಹೋಟೆಲ್ನಲ್ಲಿ ರೀಜೆನೆಸಿಸ್ AI ಸಂಸ್ಥೆ ಆಯೋಜಿಸಿದ್ದ “AI for Viksit Bharat” CXO Summit ಉದ್ಘಾಟಿಸಿ ಮಾತನಾಡಿದ ಅವರು, AI ಇಂದು ಇಂಜಿನಿಯರ್ಗಳಿಗೆ ಮಾತ್ರ ಸೀಮಿತವಾಗಿಲ್ಲ. ಸಾಮಾನ್ಯ ಜನರು ಕೂಡ AI ಮೂಲಕ ಜಗತ್ತಿನ ವಿವಿಧ ಕ್ಷೇತ್ರಗಳ ಜ್ಞಾನವನ್ನು ಸುಲಭವಾಗಿ ಮತ್ತು ವೇಗವಾಗಿ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ತಾವು ವಿಧಾನಸಭೆಯ ಸ್ಪೀಕರ್ ಆಗಿದ್ದ ಸಂದರ್ಭದಲ್ಲಿ ಸದನದಲ್ಲಿ ಸಚಿವರು ಮತ್ತು ಶಾಸಕರ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು AI ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು ಎಂದು ಅವರು ನೆನಪಿಸಿಕೊಂಡರು. AI ಉದ್ಯೋಗಗಳನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕವನ್ನು ಸಂಪೂರ್ಣವಾಗಿ ಒಪ್ಪಲು ಸಾಧ್ಯವಿಲ್ಲ. ಬದಲಾಗಿ, AI ಬಳಕೆಯಿಂದ ಕೆಲಸವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮತ್ತು ಗುಣಮಟ್ಟದಿಂದ ನಿರ್ವಹಿಸಬಹುದು ಎಂದು ಖಾದರ್ ಅಭಿಪ್ರಾಯಪಟ್ಟರು.
ಭಾರತದ ಬಹುದೊಡ್ಡ ಶಕ್ತಿ ಅದರ ಪ್ರಾದೇಶಿಕ ಭಾಷೆಗಳಾಗಿದ್ದು, AI ಮೂಲಕ ಅವುಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಬೇಕು ಎಂದು ಅವರು ಕರೆ ನೀಡಿದರು. ಅಲ್ಲದೆ, ಸಂವಿಧಾನದ ಮೌಲ್ಯಗಳನ್ನು AI ತಂತ್ರಜ್ಞಾನದ ಮೂಲಕ ಜನರಿಗೆ ತಲುಪಿಸುವ ಪ್ರಯತ್ನಗಳಿಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…