ರಾಜ್ಯ

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ರೈತರ ಜಮೀನಿನಲ್ಲಿ ದಬ್ಬಾಳಿಕೆ ನಡೆಸುವುದು, ಸೂಕ್ತ ಪರಿಹಾರ ನೀಡದೆ ವಿಂಡ್ ಟರ್ಬೈನ್ ರೆಕ್ಕೆಗಳನ್ನು ಸಾಗಿಸುವುದು ಹಾಗೂ ರಸ್ತೆ ನಿರ್ಮಾಣದ ಹೆಸರಿನಲ್ಲಿ ಮರ-ಗಿಡಗಳನ್ನು ನಾಶಪಡಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ. ವಿಂಡ್ ಮಿಲ್ ಕಂಪನಿ ಸಿಬ್ಬಂದಿ ರೈತರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. “ನಿನ್ನ ಜಮೀನಿದ್ರೆ ಮಾತಾಡು, ಇಲ್ಲದಿದ್ದರೆ ಇಲ್ಲಿಂದ ಹೋಗು” ಎಂಬ ರೀತಿಯ ಬೆದರಿಕೆ ಮಾತುಗಳಿರುವ ವಿಡಿಯೊಗಳನ್ನು ಅಧಿಕಾರಿಗಳಿಗೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೃಹತ್ ಗಾತ್ರದ ವಿಂಡ್ ಟರ್ಬೈನ್ ರೆಕ್ಕೆಗಳನ್ನು ಸಾಗಿಸಲು ರಸ್ತೆಬದಿಯ ಮರಗಳು ಹಾಗೂ ಗಿಡಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಾತ್ರಿ ವೇಳೆ ರಸ್ತೆ ನಿರ್ಮಾಣದ ಹೆಸರಿನಲ್ಲಿ ವೃಕ್ಷಸಂಪತ್ತಿಗೆ ಹಾನಿ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕೆಲ ಸ್ಥಳೀಯ ಜನಪ್ರತಿನಿಧಿಗಳ ಬೆಂಬಲದಿಂದ ಕಂಪನಿಗಳು ನಿರ್ಭಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ. ಯಲಬುರ್ಗಾ ತಾಲೂಕಿನ ಬುಕ್ಕನಟ್ಟಿ ಗ್ರಾಮದ ಸರ್ವೇ ನಂ. 64, ಹಿರೇಬೊಮ್ಮನಾಳ ಹಾಗೂ ಗುನ್ನಾಳ ರಸ್ತೆ ಭಾಗಗಳಲ್ಲಿ ಮರಗಳನ್ನು ತೆರವುಗೊಳಿಸಿ, ರೈತರ ಜಮೀನಿನಲ್ಲಿ ದಬ್ಬಾಳಿಕೆಯಿಂದ ವಿಂಡ್ ಮಿಲ್ ಅಳವಡಿಕೆ ನಡೆಯುತ್ತಿದೆ ಎಂದು ರೈತರು ದೂರಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಅವರು ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಬೇಕು. ವಿಂಡ್ ಮಿಲ್ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಪರಿಸರ ಮತ್ತು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…

1 hour ago

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

 ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…

1 hour ago

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…

1 hour ago

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

1 day ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

1 day ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

1 day ago