ಕಾಸರಗೋಡು: ಮಣಿ ಕೃಷ್ಣ ಸ್ವಾಮಿ ಅಕಾಡಮಿ ಯ ಶ್ರೀ ಕ್ಷೇತ್ರ ಧರ್ಮಸ್ಥಳ ಕೃತಿಗಳಾಧರಿತ 14″ನೇ ಸಂಗೀತ ಕಛೇರಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯಿತು. ವಿದ್ವಾನ್ ಕಲ್ಮಾಡಿ ಸದಾಶಿವ ಆಚಾರ್ಯ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಗಡಿನಾಡು ಕಾಸರಗೋಡಿನಲ್ಲಿ ಚಾರಿತ್ರಿಕ ಕಾರ್ಯಕ್ರಮ ಆಯೋಜಿಸಿ ಸಿರಿಬಾಗಿಲು ಪ್ರತಿಷ್ಠಾನದ ಯೋಜನೆ ಯೋಚನೆ ಅದ್ವಿತೀಯವಾದುದು. ಸಾಂಸ್ಕೃತಿಕ ಹಾಗು ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕಾಯಕ ಪ್ರತಿಷ್ಠಾನ ನಡೆಸುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದ ಕೃತಿ ಗಳ ನ್ನು ಆಧಾರಿಸಿ ಮಣಿಕೃಷ್ಣ ಸ್ವಾಮಿ ಅಕಾಡಮಿ ಯು ಇಂತಹ ಅಪೂರ್ವ ವಾದ ಕೊಡುಗೆ ಸಮಾಜಕ್ಕೆ ನೀಡುತ್ತಿದೆ. ಮಂಜುನಾಥ ಸ್ವಾಮಿಯು ಅನುಗ್ರಹಿಸಲಿ ಎಂದು ಹರಸಿದರು. ಶ್ರೀ ಕಲ್ಮಾಡಿ ಸದಾಶಿವ ಆಚಾರ್ಯ ರವರು ಅಪಾರ ಶಿಷ್ಯ ವೃಂದ ವನ್ನು ಹೊಂದಿದ ಸಂಗೀತ ಕ್ಷೇತ್ರದ ಕಾಸರಗೋಡಿನ ಹಿರಿಯ ವಿದ್ವಾಂಸ ರಾಗಿದ್ದಾರೆ.
ಧಾರ್ಮಿಕ ಮುಂದಾಳು ಶ್ರೀ ವೆಂಕಟ್ರಮಣ ಹೊಳ್ಳ ಕಾಸರಗೋಡು, ನಿವೃತ್ತ ಪ್ರಾಧ್ಯಾಪಕ ಪ್ರೋ. ಶ್ರೀನಾಥ್, ಶ್ರೀ ಮೋಹನದಾಸ್ ಶೆಟ್ಟಿ ಸಿರಿಬಾಗಿಲು, ಸಂಗೀತ ವಿಧುಷಿ ಶ್ರೀಮತಿ ರಾಧಾ ಮುರಳೀಧರನ್,ಶ್ರೀ ಲಕ್ಷ್ಮೀ ನಾರಾಯಣ ಕಾವುಮಠ ಉಪಸ್ಥಿತರಿದ್ದರು.
ಹಲವು ಕ್ಷೇತ್ರದಲ್ಲಿ ಸಂಗೀತ ಕಾರ್ಯಾಗಾರ ನಡೆಸಿದ್ದೇವೆ. ಯಕ್ಷಗಾನ ಕ್ಷೇತ್ರದ ಪ್ರಧಾನ ಕೇಂದ್ರವಾಗಿರುವ ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇದೇ ಪ್ರಥಮ. ನಮ್ಮ ಸುಯೋಗ ವೆಂದು ಮಣಿ ಕೃಷ್ಣ ಸ್ವಾಮಿ ಅಕಾಡಮಿಯ ಕಾರ್ಯದರ್ಶಿ ಶ್ರೀ ನಿತ್ಯಾನಂದ ರಾವ್ ಪೇಜಾವರ ಅಂದರು.
ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರು ಸ್ವಾಗತಿಸಿದರು.
ಆ ಬಳಿಕ ಶ್ರೇಯಾ ಕೊಳತ್ತಾಯ ಸುರತ್ಕಲ್, ಉಷಾ ರಾಮಕೃಷ್ಣ ಭಟ್ ಕಿನ್ನಿಗೊಳಿ, ಶರಣ್ಯಾ ಕೆ.ಯಸ್. ಸುರತ್ಕಲ್, ಸುಮೇಧಾ ಕೆ.ಯನ್.ಮೇಧಾ ಉಡುಪ ಮಂಗಳೂರು ಇವರಿಂದ ಮಂಜುನಾದ ಸಂಗೀತ ಕಛೇರಿ ನಡೆಯಿತು, ವಯಲಿನ್ ನಲ್ಲಿ ತನ್ಮಯಿ ಉಪ್ಪಂಗಳ, ಮೃದಂಗ ದಲ್ಲಿ ಕೌಶಿಕ್ ರಾಮಕೃಷ್ಣನ್ ಕಾಸರಗೋಡು ಸಹಕರಿಸಿದರು .
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…