ಕರಾವಳಿ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

 ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ ಎಂದು ಪ್ರಾರ್ಥಿಸಿ ಗಂಗೊಳ್ಳಿಯಲ್ಲಿ ಮೀನುಗಾರರು ಸಂಪ್ರದಾಯಬದ್ಧವಾಗಿ ಸಮುದ್ರ ಪೂಜೆ ನೆರವೇರಿಸಿದರು.

ಅರ್ಚಕ ವೇದಮೂರ್ತಿ ವಿಠಲ್‌ದಾಸ್ ಭಟ್ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ಪರ್ಸಿನ್ ಬೋಟ್, 320 ಬೋಟ್ ಹಾಗೂ ಟ್ರಾಲರ್ ಬೋಟ್‌ಗಳ ಸಂಘದ ಸದಸ್ಯರು ಪಾಲ್ಗೊಂಡು ಸಮುದ್ರ ರಾಜನಿಗೆ ಹಾಲು, ತೆಂಗಿನಕಾಯಿ, ಫಲ-ಪುಷ್ಪಗಳನ್ನು ಅರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಎರಡು ತಿಂಗಳ ಮೀನುಗಾರಿಕಾ ನಿಷೇಧ ಜುಲೈ 31ಕ್ಕೆ ಅಂತ್ಯಗೊಂಡಿದ್ದರೂ, ಸಮುದ್ರದಲ್ಲಿ ಅಲೆಗಳ ಅಬ್ಬರ ಮತ್ತು ಪ್ರಕ್ಷುಬ್ಧ ವಾತಾವರಣ ಮುಂದುವರಿದಿರುವುದರಿಂದ ಮೀನುಗಾರರು ಇನ್ನೂ ಕಡಲಿಗಿಳಿಯಲು ಸಾಧ್ಯವಾಗಿಲ್ಲ. ಪ್ರಸ್ತುತ ಗಂಗೊಳ್ಳಿ ಬಂದರಿನಲ್ಲಿ ದಡದಲ್ಲಿರುವ ಬೋಟ್‌ಗಳನ್ನು ನೀರಿಗೆ ಇಳಿಸಲು ಸಿದ್ಧತೆ, ಬಲೆ ಹೆಣೆಯುವುದು, ಮೀನುಗಾರಿಕಾ ಪರಿಕರಗಳ ಜೋಡಣೆ ಹಾಗೂ ಬೋಟ್‌ಗಳಿಗೆ ಬಣ್ಣ ಬಳಿಯುವ ಕೆಲಸ ಭರದಿಂದ ಸಾಗುತ್ತಿದೆ. ಸಮುದ್ರದ ವಾತಾವರಣ ಅನುಕೂಲಕರವಾದರೆ ಆಗಸ್ಟ್ 16ರ ಬಳಿಕ ಗಂಗೊಳ್ಳಿಯ ಮೀನುಗಾರರು ಮೀನುಗಾರಿಕೆಗೆ ತೆರಳುವ ನಿರೀಕ್ಷೆಯಿದೆ ಎಂದು ಪರ್ಸಿನ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಡಿವಾಳ ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…

1 hour ago

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…

1 hour ago

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…

3 hours ago

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

 ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…

3 hours ago

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…

3 hours ago

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…

3 hours ago