ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಕಂದಾವರ ನಿವಾಸಿ ಋತಿ ಎಂದು ಗುರುತಿಸಲಾಗಿದೆ. ಇವರು ಗುರುಪುರ ಕೈಕಂಬ ಸಮೀಪದ ಕಿನ್ನಿಕಂಬಳದಲ್ಲಿರುವ ಬೆಥನಿ ಸಿಬಿಎಸ್ಇ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯಾಗಿದ್ದರು. ಋತಿ ಅವರು ಛಾಯಾಗ್ರಾಹಕ ದೀಪಕ್ ಕೋಟ್ಯಾನ್ ಹಾಗೂ ಜಯಶ್ರೀ ದಂಪತಿಯ ಪುತ್ರಿಯಾಗಿದ್ದಾರೆ. ವಿದ್ಯಾರ್ಥಿನಿಯ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಶಾಲೆಯ ಶಿಕ್ಷಕರು, ಸಹಪಾಠಿಗಳು ಹಾಗೂ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



