ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ ಹಲವು ಪ್ರಶ್ನೆಗಳು ಎದ್ದಿರುವ ನಡುವೆಯೇ ಮತ್ತೊಂದು ಕುತೂಹಲಕಾರಿ ವರದಿ ಹೊರಬಿದ್ದಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಟೆಹ್ರಾನ್ನ ರಹಸ್ಯ ಸ್ಥಳವೊಂದರಲ್ಲಿ ಮೊಜ್ತಬಾ ಖಮೇನಿ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದ್ದು, ಆ ಭೇಟಿಯ ಸಂದರ್ಭದಲ್ಲೂ ಅವರಿಗೆ ಖಮೇನಿ ಅವರ ಮುಖವೇ ಸ್ಪಷ್ಟವಾಗಿ ಕಾಣಲಿಲ್ಲ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
‘ಇರಾನ್ ಇಂಟರ್ನ್ಯಾಷನಲ್’ ವರದಿ ಪ್ರಕಾರ, ಟೆಹ್ರಾನ್ನ ಅಜ್ಞಾತ ಸ್ಥಳದಲ್ಲಿ ಕಪ್ಪು ಗಾಜು ಹೊಂದಿದ್ದ ಕಾರಿನ ಹಿಂಬದಿ ಸೀಟಿನಲ್ಲಿ ಖಮೇನಿ ಇದ್ದರೆಂದು ಹೇಳಲಾದ ವ್ಯಕ್ತಿಯನ್ನು ಅಧ್ಯಕ್ಷ ಪೆಜೆಶ್ಕಿಯಾನ್ ಭೇಟಿಯಾಗಿದ್ದರು. ಆದರೆ ಕಾರಿನೊಳಗೆ ಸಂಪೂರ್ಣ ಕತ್ತಲೆ ಇದ್ದ ಕಾರಣ ಆ ವ್ಯಕ್ತಿಯ ಮುಖ ಗುರುತಿಸಲು ಸಾಧ್ಯವಾಗಲಿಲ್ಲ. ಇದರಿಂದ “ನೀವು ನಿಜವಾಗಿಯೂ ಮೊಜ್ತಬಾ ಖಮೇನಿಯೇ?” ಎಂದು ಅಧ್ಯಕ್ಷರು ಪ್ರಶ್ನಿಸಿದ್ದರೆಂದು ವರದಿ ತಿಳಿಸಿದೆ.
ಇರಾನ್ನಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ಸಂದರ್ಭದಲ್ಲಿ ಹಾಗೂ ಅಧ್ಯಕ್ಷ ಪೆಜೆಶ್ಕಿಯಾನ್ ರಾಜೀನಾಮೆ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿದ್ದ ಹಿನ್ನೆಲೆ ಈ ಭೇಟಿ ಆಯೋಜಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಭೇಟಿಯ ವೇಳೆ ಅಧ್ಯಕ್ಷರಿಗೆ ಖಮೇನಿ ಅವರೊಂದಿಗೆ ಹಸ್ತಲಾಘವ ಮಾಡುವ ಅವಕಾಶವೂ ಸಿಗಲಿಲ್ಲ ಎನ್ನಲಾಗಿದೆ. ಅಧ್ಯಕ್ಷರೊಂದಿಗೆ ನಡೆದುಕೊಂಡ ರೀತಿಯಿಂದ ಅವರು ತೀವ್ರ ಅಸಮಾಧಾನಗೊಂಡಿದ್ದರು ಎಂದು ಅಧ್ಯಕ್ಷರ ಕಚೇರಿಯ ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ. ಬಳಿಕ ಮತ್ತೊಮ್ಮೆ ಭೇಟಿಗೆ ಮನವಿ ಮಾಡಿದರೂ ಅದನ್ನು ತಕ್ಷಣವೇ ತಿರಸ್ಕರಿಸಲಾಗಿದೆ ಎಂದು ತಿಳಿಸಲಾಗಿದೆ.
ಫೆಬ್ರವರಿಯಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಮಾಜಿ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಆ ದಾಳಿಯಲ್ಲಿ ಮೊಜ್ತಬಾ ಖಮೇನಿ ಕೂಡ ಗಂಭೀರವಾಗಿ ಗಾಯಗೊಂಡಿದ್ದರು ಎಂಬ ವರದಿಗಳು ಈ ಹಿಂದೆ ಪ್ರಕಟವಾಗಿದ್ದವು. ಅವರು ತಮ್ಮ ತಂದೆಯ ಅಂತ್ಯಕ್ರಿಯೆಯಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.
ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಇರಾನ್ನ ಉನ್ನತ ನಾಯಕತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿ, “ಮೊಜ್ತಬಾ ಖಮೇನಿ ಜೀವಂತವಾಗಿದ್ದಾರೋ ಇಲ್ಲವೋ ಗೊತ್ತಿಲ್ಲ” ಎಂದು ಹೇಳಿದ್ದರು.
ಈ ನಡುವೆ ಇರಾನ್ನಲ್ಲಿ ನಾಗರಿಕ ಸರ್ಕಾರಕ್ಕಿಂತ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪ್ರಭಾವ ಹೆಚ್ಚಾಗಿದ್ದು, ಸುಪ್ರೀಂ ಲೀಡರ್ ಅವರನ್ನು ಸಂಪರ್ಕಿಸುವುದು ಅತ್ಯಂತ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಪೆಜೆಶ್ಕಿಯಾನ್ ಇತ್ತೀಚೆಗೆ ಒಪ್ಪಿಕೊಂಡಿದ್ದರು.
ಇದೀಗ ಹೊರಬಿದ್ದಿರುವ ವರದಿ ಹೊಸ ಅನುಮಾನಗಳಿಗೆ ಕಾರಣವಾಗಿದ್ದು, ಅಧ್ಯಕ್ಷರನ್ನು ಸಮಾಧಾನಪಡಿಸಲು ಖಮೇನಿ ಅವರನ್ನು ಹೋಲುವ ವ್ಯಕ್ತಿಯನ್ನು ಕಾರಿನಲ್ಲಿ ಕೂರಿಸಿ ಭೇಟಿ ಮಾಡಿಸಲಾಗಿತ್ತೇ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಆದರೆ ಈ ವರದಿಯನ್ನು ಇರಾನ್ ಸರ್ಕಾರ ಅಧಿಕೃತವಾಗಿ ದೃಢಪಡಿಸಿಲ್ಲ.
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…