ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.
ಬೆಳಗ್ಗೆ ಸುಮಾರು 11 ಗಂಟೆಗೆ ಹಮೀದ್ ಅವರು ಪೇಟೆಗೆ ತೆರಳಿದ್ದ ವೇಳೆ, ಅವರ ಪತ್ನಿ ಖೈರುನ್ನಿಸಾ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಗ್ಯಾಸ್ ಸಿಲಿಂಡರ್ನ ರೆಗ್ಯುಲೇಟರ್ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಖೈರುನ್ನಿಸಾ ಅವರು ಕೂಗಿಕೊಂಡಿದ್ದು, ಶಬ್ದ ಕೇಳಿಸಿಕೊಂಡ ನೆರೆಯ ನಿವಾಸಿ ಉಮ್ಮರ್ ಸ್ಥಳಕ್ಕೆ ಧಾವಿಸಿದ್ದಾರೆ. ಮನೆಯಲ್ಲಿದ್ದವರನ್ನು ಕೂಡಲೇ ಅಂಗಳಕ್ಕೆ ಕರೆತಂದು ರಕ್ಷಿಸಿದ್ದಾರೆ.
ಅವರು ಹೊರಗೆ ಬಂದ ಕೆಲವೇ ಕ್ಷಣಗಳಲ್ಲಿ ಗ್ಯಾಸ್ ಸಿಲಿಂಡರ್ ಭೀಕರವಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಅಡುಗೆ ಕೋಣೆ ಸಂಪೂರ್ಣ ಧ್ವಂಸಗೊಂಡಿದೆ.
ಮನೆಯಲ್ಲಿದ್ದ ಗೃಹಬಳಕೆಯ ವಸ್ತುಗಳು, ದಾಖಲೆಗಳು ಹಾಗೂ ಪೀಠೋಪಕರಣಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ವಿಟ್ಲದ ಇಂಡೇನ್ ಗ್ಯಾಸ್ ವಿತರಕ ‘ಸಾಯಿ ಗಣೇಶ್’ ಸಂಸ್ಥೆಯ ಮಾಲೀಕ ಸತೀಶ ಆಳ್ವ ಸೇರಿದಂತೆ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…