ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ ಸನ್ಮಾನ ಕಾರ್ಯಕ್ರಮ ಕದ್ರಿ ಬಂಜನ್ ಚಾವಡಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ಹಿಲ್‌ಸೈಡ್ ಆರ್ಕಿಟೆಕ್ಟ್‌ನ ವ್ಯವಸ್ಥಾಪಕ ನಿರ್ದೇಶಕ ರಾಧಾಕೃಷ್ಣ ಬಂಜನ್, ದೇಶದ ಭದ್ರತೆಗೆ ಪಾಕಿಸ್ತಾನ, ಚೀನಾ ಸೇರಿದಂತೆ ಬಾಹ್ಯ ಶಕ್ತಿಗಳಿಂದ ಮಾತ್ರವಲ್ಲದೆ, ದೇಶದೊಳಗಿನ ದೇಶದ್ರೋಹಿಗಳಿಂದಲೂ ಸವಾಲು ಎದುರಾಗುತ್ತಿದೆ ಎಂದು ಹೇಳಿದರು.

ಇಂತಹ ಸವಾಲುಗಳನ್ನು ನಿಯಂತ್ರಿಸುವುದು ಅತ್ಯಂತ ಕಷ್ಟದ ಕಾರ್ಯ. ಆದರೆ ದೇಶದ ಸೈನಿಕರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ ಮತ್ತು ತ್ಯಾಗದಿಂದಾಗಿ ಕೋಟ್ಯಂತರ ಜನರು ಸುರಕ್ಷಿತವಾಗಿ ಬದುಕಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಎಸ್‌ಎಫ್‌ನ ನಿವೃತ್ತ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ, ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಅಧ್ಯಕ್ಷ ಸುಂದರ್ ಕುಲಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

error: Content is protected !!