ನಂದಳಿಕೆ: ಮಾವಿನಕಟ್ಟೆ ಬಸ್ ತಂಗುದಾಣದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿದ್ದು ಸಾರ್ವಜನಿಕರು ನಂದಳಿಕೆ ಗ್ರಾಮ ಪಂಚಾಯತ್ ಗೆ ದೂರು ನೀಡಿದ ಹಿನ್ನೆಲೆ, ಮೃತ ದೇಹವನ್ನು ತೆರವುಗೊಳಿಸುವುದರ ಬದಲು ಸತ್ತ ನಾಯಿಯ ಮೇಲೆ ಮಣ್ಣು ಸುರಿದು ಹೋದ ಘಟನೆ ವರದಿಯಾಗಿದೆ. ಸತ್ತ ನಾಯಿಯ ದಫನ ಮಾಡುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಸ್ಥಳೀಯಾಡಳಿ ಮುಂದಾಗಬೇಕಿತ್ತು. ಆದರೆ ನಂದಳಿಕೆ ಗ್ರಾಮ ಪಂಚಾಯತ್ ಆಡಳಿತ ವರ್ಗವು ತಂಗುದಾಣದಲ್ಲಿ ಸತ್ತು ಬಿದ್ದ ನಾಯಿಯ ಮೇಲೆ ಒಂದು ಲೋಡ್ ಮಣ್ಣು ತಂದು ಹಾಕಿರುವ ಮೂಲಕ ವಿಶಿಷ್ಠ ರೀತಿಯಲ್ಲಿ ದಫನಕ್ರಿಯೆ ನಡೆಸಿರುವುದು ಕಂಡು ಬಂದಿದೆ.
ಇದೀಗ ಮಳೆ ಸುರಿಯುತ್ತಿರುವ ಹಿನ್ನೆಲೆ ಜನ ಬಸ್ಸ್ಟಾಂಡ್ ನಲ್ಲಿ ನಿಲ್ಲಲು ಸಾಧ್ಯವಾಗದೆ ರಸ್ತೆ ಬದಿ ನಿಲುವಂತಾಗಿದ್ದು ಪಂಚಾಯತ್ ನ ಈ ನಡೆಗೆ ಸಾರ್ವಜನಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…