ಬಂಟ್ವಾಳ ಪುರಸಭೆಯಲ್ಲಿ ಬಳಕೆಗೆ ಬಾರದೆ ಬಾಕಿಯಾಗಿದ್ದ ಹೊಸ ಜೆಸಿಬಿ ಇದೀಗ ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರ ಮುತುವರ್ಜಿಯಿಂದ ಕಂಚಿನಡ್ಕ ಪದವಿನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ತೆರಳಿದ್ದು, ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ.
ಕಂಚಿನಡ್ಕ ಪದವಿನ ತ್ಯಾಜ್ಯ ಸಂಸ್ಕರಣಾ ಘಟಕದ ಆವರಣದಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ವಿಲೇವಾರಿ ಕಾರ್ಯಕ್ಕೆ ಕೆಲವೊಂದು ಅಡಚಣೆಗಳು ಎದುರಾಗಿವೆ. ಮಳೆ ಕಡಿಮೆಯಾದ ಕೂಡಲೇ ತ್ಯಾಜ್ಯ ವಿಲೇವಾರಿ ಕಾರ್ಯವನ್ನು ಚುರುಕುಗೊಳಿಸುವುದಾಗಿ ಮುಖ್ಯಾಧಿಕಾರಿ ತೀರ್ಥಪ್ರಸಾದ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ವಾರದಲ್ಲಿ ಕನಿಷ್ಠ ಮೂರು ಬಾರಿ ಘಟಕಕ್ಕೆ ಖುದ್ದಾಗಿ ಭೇಟಿ ನೀಡಿ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಪರಿಶೀಲಿಸಲಾಗುವುದು. ಅಗತ್ಯ ಕ್ರಮಗಳನ್ನು ಕೈಗೊಂಡು ಮುಂದಿನ ಮೂರು ತಿಂಗಳಲ್ಲಿ ಇಲ್ಲಿನ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಅಗತ್ಯವಿದ್ದಲ್ಲಿ ದಿನಗೂಲಿ ನೌಕರರನ್ನು ನೇಮಕ ಮಾಡಿಕೊಂಡು ತ್ಯಾಜ್ಯ ವಿಲೇವಾರಿ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹೊಸ ಜೆಸಿಬಿ ಬಳಕೆಗೆ ಬಂದಿರುವುದರಿಂದ ಘಟಕದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯಕ್ಕೆ ವೇಗ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…