ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್ನಿಂದ ಮಂಗಳೂರಿಗೆ ವಾಪಸಾಗಿದ್ದ ಆಕೆಯ ಸಹೋದರ ಲಾಡ್ಜ್ವೊಂದರಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ನಡೆದಿದೆ.
ಕೇರಳದ ಬೇಕಲ್ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ ಮೃತರು. ಕಳೆದ ಜೂನ್ನಲ್ಲಿ ಅರ್ಜುನ್ ಅವರ ಸಹೋದರಿ ಐಜಾ ಆರ್. ಮಹೇಶ್ ಅವರು ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಗೊಂದಲದ ಬಳಿಕ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಐಜಾ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿತ್ತು.
ತಂಗಿಯ ಸಾವಿನ ಸುದ್ದಿ ತಿಳಿದು ಗಲ್ಫ್ನಿಂದ ಮನೆಗೆ ಬಂದಿದ್ದ ಅರ್ಜುನ್ ಬಳಿಕ ಮತ್ತೆ ಉದ್ಯೋಗಕ್ಕಾಗಿ ಗಲ್ಫ್ಗೆ ತೆರಳಿದ್ದರು. ಭಾನುವಾರ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಅವರು, ಮನೆಗೆ ವಾಪಸಾಗುತ್ತಿರುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅದೇ ದಿನ ಮಧ್ಯಾಹ್ನ ತಾಯಿಗೂ ಕರೆ ಮಾಡಿದ್ದರು ಎನ್ನಲಾಗಿದೆ.
ಬಳಿಕ ಅರ್ಜುನ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ಕುಟುಂಬಸ್ಥರು ಮಂಗಳೂರಿಗೆ ಆಗಮಿಸಿ ಹುಡುಕಾಟ ನಡೆಸಿದ್ದರು. ಈ ವೇಳೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರಿನ ಲಾಡ್ಜ್ವೊಂದರಲ್ಲಿ ಅರ್ಜುನ್ ಶವವಾಗಿ ಪತ್ತೆಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬಜ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಒಂದೇ ಕುಟುಂಬದ ಇಬ್ಬರು ಯುವ ಮಕ್ಕಳು ಅಲ್ಪಾವಧಿಯಲ್ಲೇ ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಬಜ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…
ಬಂಟ್ವಾಳ ಪುರಸಭೆಯಲ್ಲಿ ಬಳಕೆಗೆ ಬಾರದೆ ಬಾಕಿಯಾಗಿದ್ದ ಹೊಸ ಜೆಸಿಬಿ ಇದೀಗ ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರ ಮುತುವರ್ಜಿಯಿಂದ ಕಂಚಿನಡ್ಕ ಪದವಿನ…