ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ ಅಮಾವಾಸ್ಯೆಯ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮವು ಬಿ.ಸಿ.ರೋಡಿನ ರಕ್ತೇಶ್ವರಿ ಸನ್ನಿಧಿಯಲ್ಲಿ ನಡೆಯಿತು.

ಆಟಿ ಅಮಾವಾಸ್ಯೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅಸಂಖ್ಯ ಭಕ್ತರು ಪಾಲ್ಗೊಂಡು ಪಾಲೆದ ಕೆತ್ತೆ ಕಷಾಯ ಸ್ವೀಕರಿಸಿದರು. ಈ ಸಂದರ್ಭದಲ್ಲಿ ತುಳುಕೂಟ ಬಂಟ್ವಾಳದ ಅಧ್ಯಕ್ಷ ಸುದರ್ಶನ್ ಜೈನ್, ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಬಿ. ಮೋಹನ್, ಹಿರಿಯರಾದ ಶಿವಶಂಕರ್, ಎನ್.ಕೆ. ಸೀತಾರಾಮ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ವೇಳೆ ಈ ವರ್ಷ ಪ್ರಥಮ ಬಾರಿಗೆ ಮೆಂತೆ ಗಂಜಿ ವಿತರಿಸುವ ವ್ಯವಸ್ಥೆಯನ್ನು ಮಮತೇಶ್ ಕುಲಾಲ್ ಮಾಡಿದ್ದರು. ಭಕ್ತರು ಕಷಾಯ ಹಾಗೂ ಮೆಂತೆ ಗಂಜಿ ಸ್ವೀಕರಿಸಿದರು.



