ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಫಿಲೋ ಆಟಿದ ಕೂಟ’ ಕಾರ್ಯಕ್ರಮವು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ‘ತುಳುನಾಡ ಮಾಣಿಕ್ಯ’ ಅರವಿಂದ್ ಬೋಳಾರ್ ಮಾತನಾಡಿ, ಕಾಲೇಜಿನಲ್ಲಿ ಇಂತಹ ಸಾಂಸ್ಕೃತಿಕ ಆಚರಣೆಗಳನ್ನು ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ತುಳುನಾಡಿನ ಸಂಸ್ಕೃತಿ ಹಾಗೂ ಪರಂಪರೆಯ ಪರಿಚಯವಾಗುತ್ತದೆ ಎಂದು ಹೇಳಿದರು.
“ನಮ್ಮ ಸಂಸ್ಕೃತಿಯ ವಾರಸುದಾರರಾಗಿ ವಿದ್ಯಾರ್ಥಿಗಳು ಮುಂದಿನ ಪೀಳಿಗೆಗೆ ಈ ಪರಂಪರೆಯನ್ನು ಕೊಂಡೊಯ್ಯುವ ಕೆಲಸ ಮಾಡಬೇಕು” ಎಂದು ಅವರು ಕರೆ ನೀಡಿದರು.

ನಮ್ಮ ಸಂಸ್ಕೃತಿಯ ಮೂಲವೇ ತಂದೆ-ತಾಯಿಗೆ ನೀಡುವ ಗೌರವ. ವಿದ್ಯಾರ್ಥಿಗಳು ತಮ್ಮ ಕರ್ತವ್ಯವನ್ನು ಅರಿತು, ಉತ್ತಮ ನಡತೆಯನ್ನು ರೂಢಿಸಿಕೊಂಡು ವಿದ್ಯಾಭ್ಯಾಸದಲ್ಲಿ ಮುನ್ನಡೆದು ಜೀವನದಲ್ಲಿ ಉತ್ತಮ ಸ್ಥಾನಮಾನ ಪಡೆಯಬೇಕು ಎಂದು ಅರವಿಂದ್ ಬೋಳಾರ್ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತುಳುನಾಡಿನ ಆಚಾರ-ವಿಚಾರ, ಸಂಪ್ರದಾಯ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಪ್ರತಿಬಿಂಬಿಸುವ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ‘ಆಟಿದ ಕೂಟ’ದ ಸಂಭ್ರಮವನ್ನು ಹೆಚ್ಚಿಸಿದರು.



