ಬಹಾದ್ದೂರ್ ಗ್ರೂಪ್ ಆಫ್ ಕಂಪೆನಿ ಹಾಗೂ ಬಹಾದ್ದೂರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದ ಅಲ್ ಬಿರ್ರ್ ಶಾಲೆಗೆ ಟಾಟಾ ಮ್ಯಾಜಿಕ್ ಮಿನಿ ವ್ಯಾನ್ ಹಾಗೂ ಸಾರ್ವಜನಿಕ ಸೇವೆಗಾಗಿ ಅಂಬುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ.
ಕಲ್ಲಡ್ಕ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡೂ ವಾಹನಗಳನ್ನು ಲೋಕಾರ್ಪಣೆಗೊಳಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಸಯ್ಯಿದ್ ಅಲಿ ಮನ್ನಾನಿ, ದಾನ-ಧರ್ಮವು ಮಾನವನ ಸಂಕಷ್ಟಗಳಿಗೆ ಪರಿಹಾರವಾಗಿದ್ದು, ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಸಮಾಜ ಸೇವೆ ಮಾಡುವ ಮೂಲಕ ಜೀವನವನ್ನು ಪಾವನಗೊಳಿಸಬೇಕು ಎಂದು ಕರೆ ನೀಡಿದರು.
ಮಸೀದಿ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪನಾಮಾ ಮಾತನಾಡಿ, ಪ್ರಸಕ್ತ ವರ್ಷ ಅಲ್ ಬಿರ್ರ್ ಶಾಲೆ ಆರಂಭವಾಗಿದ್ದು, ಶಾಲಾ ವಾಹನದ ಅಗತ್ಯತೆ ಕುರಿತು ಝೈನುಲ್ ಆಬಿದ್ ಅವರನ್ನು ಸಂಪರ್ಕಿಸಿದಾಗ ತಕ್ಷಣ ಸ್ಪಂದಿಸಿದ್ದಾರೆ. ಅಲ್ಲದೆ, ಜಾತಿ-ಧರ್ಮದ ಭೇದವಿಲ್ಲದೆ ಕಲ್ಲಡ್ಕದ ಎಲ್ಲಾ ನಾಗರಿಕರ ತುರ್ತು ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಅಂಬುಲೆನ್ಸ್ನ್ನೂ ಕೊಡುಗೆಯಾಗಿ ನೀಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಮುರಬೈಲ್, ಕೋಶಾಧಿಕಾರಿ ಜವಾಝ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು…
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್…
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ…
ಮಾದಕ ದ್ರವ್ಯಗಳ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ…
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು…
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಫಿಲೋ ಆಟಿದ ಕೂಟ’ ಕಾರ್ಯಕ್ರಮವು ಕಾಲೇಜಿನ…