ಹಾಸನದಿಂದ ಮಂಗಳೂರು ಮಾರ್ಗವಾಗಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ಐ ಮಂಜುನಾಥ್ ಟಿ. ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ. ಕಾರ್ಯಾಚರಣೆಯಲ್ಲಿ ₹1,05,59,450 ಮೌಲ್ಯದ ಮಾದಕವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಟ್ವಾಳ ಉಪವಿಭಾಗದ ಎಎಸ್ಪಿ ಐಪಿಎಸ್ ಯಶ್ ಕುಮಾರ್ ಶರ್ಮ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಪೊಲೀಸ್ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಗ್ರಾಮಾಂತರ ಠಾಣೆಯ ಎಸ್ಐ ಮಂಜುನಾಥ್ ಟಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.



