ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಆಗಸ್ಟ್ 19ರಂದು ‘ಕನಸ ಯುವರಾಣಿ’ ಮ್ಯೂಸಿಕಲ್ ವಿಡಿಯೋ ಸಾಂಗ್ ಬಿಡುಗಡೆ

ಅಮ್ಮಾ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ‘ಕನಸ ಯುವರಾಣಿ’ ತುಳು ಹಾಗೂ ಕನ್ನಡ ಮ್ಯೂಸಿಕಲ್ ವಿಡಿಯೋ ಸಾಂಗ್ ಆಗಸ್ಟ್ 19ರಂದು ಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ ಬಿಡುಗಡೆಯಾಗಲಿದೆ.

ಅಕ್ಷಯ್ ವಾಮಂಜೂರು ಹಾಗೂ ಧನ್ಯಾ ಚಿನ್ನು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಹಾಡಿಗೆ ಅಕ್ಷಯ್ ವಾಮಂಜೂರು ಕಥೆ ಮತ್ತು ಚಿತ್ರಕಥೆ ಬರೆದಿದ್ದು, ಪ್ರಥಮ್ ಸಾಲಿಯಾನ್ ನಿರ್ದೇಶನ ಮಾಡಿದ್ದಾರೆ.

ಸಂಗೀತ ನಿರ್ಮಾಪಕ ಹಾಗೂ ಗಾಯಕರಾಗಿ ನಿಶ್ಚಿತ್ ರಾಜ್, ಸಾಹಿತ್ಯ ಮತ್ತು ಕಲಾ ವಿಭಾಗದಲ್ಲಿ ರತೀಶ್ ರತ್ನಮಾಲ, ಛಾಯಾಗ್ರಹಣವನ್ನು ಸನತ್ ಶೆಟ್ಟಿ ಹಾಗೂ ಸಂಕಲನವನ್ನು ಯಶ್ವಿನ್ ಕೆ. ಶೆಟ್ಟಿಗಾರ್ ನಿರ್ವಹಿಸಿದ್ದಾರೆ.

ಈಗಾಗಲೇ ‘ಕನಸ ಯುವರಾಣಿ’ಯ ಟೀಸರ್ ಅಮ್ಮಾ ಕ್ರಿಯೇಷನ್ ಮಂಗಳೂರು ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ವಿಭಿನ್ನ ಕಲಾವಿದರ ಬಳಗದೊಂದಿಗೆ ಮೂಡಿಬಂದಿರುವ ಈ ಮ್ಯೂಸಿಕಲ್ ವಿಡಿಯೋ ಸಾಂಗ್ ಆಗಸ್ಟ್ 19ರಂದು ಪ್ರೇಕ್ಷಕರ ಮುಂದೆ ಬರಲಿದ್ದು, ಹೊಸ ಪ್ರಯತ್ನಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಮನೆಯಲ್ಲಿ ಒಂಟಿಯಾಗಿದ್ದ 82 ವರ್ಷದ ವೃದ್ಧೆಯ ಚಿನ್ನದ ಬಳೆ ದೋಚಿ ಪರಾರಿ..!

ಮಂಗಳೂರು: ಮಂಗಳೂರಿನ ಕೆಎಫ್‌ಸಿಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಹಳೆಯ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ಬಂಟ್ವಾಳ: ಹಾಸನ-ಮಂಗಳೂರು ಮಾರ್ಗದಲ್ಲಿ ಮಾದಕವಸ್ತು ಸಾಗಾಟ; ಓರ್ವ ಬಂಧನ

ಸೂರಿಕುಮೇರು: ಕಾರು-ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ…!

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

ಕಲ್ಲಡ್ಕ: ಅಲ್ ಬಿರ್ರ್ ಶಾಲೆಗೆ ವಾಹನ, ಸಾರ್ವಜನಿಕ ಸೇವೆಗೆ ಅಂಬುಲೆನ್ಸ್ ಕೊಡುಗೆ…!

ಮಂಗಳೂರು: ಕಪ್ಪೆಟ್ಟುವಿನಲ್ಲಿ ಅಂಬೇಡ್ಕರ್ ಕಲಾಕೃತಿ, ಪುರಾತನ ಸಂಸತ್ ಭವನದ ಮಾದರಿ

ಉಡುಪಿ: ಉಡುಪಿಯಲ್ಲಿ ಆ.15ರಂದು ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ..!

ಉಡುಪಿ: ಮಾದಕ ದ್ರವ್ಯ ಪ್ರಕರಣ: ಉಡುಪಿಯಲ್ಲಿ ಆರೋಪಿಯ ಬಂಧನ

error: Content is protected !!