ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮನೆಯಲ್ಲಿ ಒಂಟಿಯಾಗಿದ್ದ 82 ವರ್ಷದ ವೃದ್ಧೆಯ ಚಿನ್ನದ ಬಳೆ ದೋಚಿ ಪರಾರಿ..!

ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ನಡೆದಿದೆ.

ಉದ್ದದ ಗುಡ್ಡೆ ನಿವಾಸಿ ಅವ್ವಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಪ್ರವೇಶಿಸಿದ್ದಾನೆ. ಬಳಿಕ ಅವರ ಎರಡೂ ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದಾನೆ.

ಬಳೆಗಳನ್ನು ಎಳೆಯುವ ಸಂದರ್ಭದಲ್ಲಿ ವೃದ್ಧೆಯ ಎಡಕೈಗೆ ರಕ್ತಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅವ್ವಮ್ಮ ಅವರ ಪುತ್ರ ಸಾದಿಕ್ ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ 2023ರ ಕಲಂ 309ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಗಸ್ಟ್ 19ರಂದು ‘ಕನಸ ಯುವರಾಣಿ’ ಮ್ಯೂಸಿಕಲ್ ವಿಡಿಯೋ ಸಾಂಗ್ ಬಿಡುಗಡೆ

ಮಂಗಳೂರು: ಮಂಗಳೂರಿನ ಕೆಎಫ್‌ಸಿಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಹಳೆಯ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ಬಂಟ್ವಾಳ: ಹಾಸನ-ಮಂಗಳೂರು ಮಾರ್ಗದಲ್ಲಿ ಮಾದಕವಸ್ತು ಸಾಗಾಟ; ಓರ್ವ ಬಂಧನ

ಸೂರಿಕುಮೇರು: ಕಾರು-ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ…!

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

ಕಲ್ಲಡ್ಕ: ಅಲ್ ಬಿರ್ರ್ ಶಾಲೆಗೆ ವಾಹನ, ಸಾರ್ವಜನಿಕ ಸೇವೆಗೆ ಅಂಬುಲೆನ್ಸ್ ಕೊಡುಗೆ…!

ಮಂಗಳೂರು: ಕಪ್ಪೆಟ್ಟುವಿನಲ್ಲಿ ಅಂಬೇಡ್ಕರ್ ಕಲಾಕೃತಿ, ಪುರಾತನ ಸಂಸತ್ ಭವನದ ಮಾದರಿ

ಉಡುಪಿ: ಉಡುಪಿಯಲ್ಲಿ ಆ.15ರಂದು ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ..!

ಉಡುಪಿ: ಮಾದಕ ದ್ರವ್ಯ ಪ್ರಕರಣ: ಉಡುಪಿಯಲ್ಲಿ ಆರೋಪಿಯ ಬಂಧನ

error: Content is protected !!